ಬ್ರೇಕಿಂಗ್ ನ್ಯೂಸ್
14-09-23 02:38 pm HK News Desk ಕರ್ನಾಟಕ
ಬೆಂಗಳೂರು, ಸೆ.14: ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ.
ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ;
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರರನ್ನು ಪೊಲೀಸ್ ಜೀಪಿನಲ್ಲಿ ಇಂದು ಸಿಸಿಬಿ ಪೊಲೀಸರು ಕರೆತಂದಾಗ ಜೀಪಿನಿಂದ ಇಳಿಯುತ್ತಲೇ ಮಾಧ್ಯಮ ಪ್ರತಿನಿಧಿಗಳನ್ನು ಕಂಡಾಗ, ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿರುವ ಮಾಹಿತಿಯಿದೆ.
On Thursday, arrested Hindu activist Chaitra Kundapura claimed that big personalities were involved in the BJP ticket scam in Karnataka. She made the remarks to media persons while being taken for interrogation at the City Central Crime Branch (CCB) building here.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm