ಬ್ರೇಕಿಂಗ್ ನ್ಯೂಸ್
15-09-23 05:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಇ-ಎಫ್ಐಅರ್ ದಾಖಲಿಸುವುದು ಹೇಗೆ?:
ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ.
ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ, ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ನಂತರ ನಿಮ್ಮ ಮೊಬೈಲ್ ನಂಬರ್ಗೆ ಮೆಸೇಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.
ಐಪಿಎಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಪಿಎಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ ಹಾಗೂ ಸೈಬರ್ ಕ್ರೈಂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ತಡೆಯಲು ರಚಿಸಲಾಗಿದ್ದ ಫ್ಯಾಕ್ಟ್ ಚೆಕ್ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
Police department E FIR first time in Karnataka inaugurated by CM Siddaramaiah.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm