ಬ್ರೇಕಿಂಗ್ ನ್ಯೂಸ್
15-09-23 08:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಿಜೆಪಿ ಟಿಕೆಟ್ ಕೊಡಿಸುತ್ತೇವೆಂದು ಮತ್ತೊಂದು ವಂಚನೆ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೇ ಕೊಪ್ಪಳ ಜಿಲ್ಲೆಯ ಬಿಜೆಪಿ ಮುಖಂಡನಿಂದ 21 ಲಕ್ಷ ಪಡೆದು ಟೋಪಿ ಹಾಕಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಬಿಜೆಪಿ ಮುಖಂಡ ಜಿ.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಅವರನ್ನು ನಂಬಿಸಿ ಹಣ ಪಡೆದಿದ್ದಾರೆ. ತಿಮ್ಮಾರೆಡ್ಡಿ ಅವರು ತಮ್ಮ ಪತ್ನಿ ಗಾಯತ್ರಿಗೆ ಟಿಕೆಟ್ ಕೊಡಿಸುವಲ್ಲಿ ಭಾರಿ ಪ್ರಯತ್ನ ಮಾಡಿದ್ದರು. ಬಿಜೆಪಿ ಟಿಕೆಟಿಗಾಗಿ ಭಾರೀ ಪೈಪೋಟಿ ನಡೆಸಿದ್ದ ತಿಮ್ಮಾರೆಡ್ಡಿಯನ್ನು ಚೈತ್ರಾ ಕುಂದಾಪುರ ತಂಡದ ಮಾದರಿಯಲ್ಲೇ ಮೂವರ ತಂಡ ಸಂಪರ್ಕಿಸಿ ಮೋಸ ಮಾಡಿದೆ.

ಅಮಿತ್ ಷಾ ಹೆಸರಲ್ಲಿ ವಂಚನೆ
ತಾವು ಗೃಹ ಸಚಿವ ಅಮಿತ್ ಷಾ ಆಪ್ತರೆಂದು ಹೇಳಿಕೊಂಡು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಎಂಬವರು ತಿಮ್ಮಾರೆಡ್ಡಿಯನ್ನು ಸಂಪರ್ಕಿಸಿದ್ದರು. 19 ಲಕ್ಷ ನಗದು ಮತ್ತು ಎರಡು ಲಕ್ಷ ರೂ. ಖಾತೆಗೆ ಹಾಕಿಸಿಕೊಂಡಿದ್ದರು. ಚೈತ್ರಾಳ ಡೀಲ್ ಪುರಾಣ ಹೊರಬರುತ್ತಲೇ ತಿಮ್ಮಾರೆಡ್ಡಿ ಅವರು ಮೂವರು ವಂಚಕರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



ಅಮಿತ್ ಷಾ ಸೂಚನೆಯಂತೆ, ರಾಜ್ಯದಲ್ಲಿ ಸಮೀಕ್ಷೆ ಮಾಡ್ತಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೇವೆ ಎಂದು ಹೇಳಿಕೊಂಡಿದ್ದ ತಂಡದ ವಿಶಾಲ್ ನಾಗ್ ಎಂಬಾತ ತಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ತಂಡದಲ್ಲಿ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ. ಹೀಗಾಗಿ ಆತನನ್ನ ನಂಬಿ ವಿಶಾಲ್ ನಾಗ್ ಅವರ ಬ್ಯಾಂಕ್ ಖಾತೆಗ 2 ಲಕ್ಷ ರೂ., 19 ಲಕ್ಷ ನಗದನ್ನು ನೇರವಾಗಿ ನೀಡಿದ್ದೆ. ಇವರು, ನನ್ನ ರೀತಿ ಬಹಳ ಜನರಿಗೆ ಮೋಸ ಮಾಡಿದ್ದಾರೆ ಎಂದು ತಿಮ್ಮಾರೆಡ್ಡಿ ತಿಳಿಸಿದ್ದಾರೆ.
ಹೀಗಾಗಿ ಬಿಜೆಪಿ ಟಿಕೆಟ್ ಗಾಗಿ ರಾಜ್ಯದಲ್ಲಿ ಹಲವಾರು ಮಂದಿ ಆಕಾಂಕ್ಷಿಗಳು ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಚೈತ್ರಾ ಕುಂದಾಪುರ ಮತ್ತು ತಂಡ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುತ್ತೇವೆಂದು ಐದು ಕೋಟಿ ಡೀಲ್ ಮಾಡಿರೋದು ಬೆಳಕಿಗೆ ಬರುತ್ತಲೇ ಮತ್ತೊಂದು ವಂಚನೆ ಪುರಾಣ ಹೊರಬಂದಿದೆ.
Another fraud case exposed like Chaitra Kundapura in Bangalore by the name of Amith Shah, Thimareddy duped of 19 lakhs in the name of BJP Ticket.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm