ಬ್ರೇಕಿಂಗ್ ನ್ಯೂಸ್
15-09-23 09:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಚೈತ್ರಾ ಕುಂದಾಪುರ ಬಾಯಲ್ಲಿ ನೊರೆ ಬಂದ ರೀತಿ ಕುಸಿದು ಬಿದ್ದು ಅಧಿಕಾರಿಗಳನ್ನೇ ಅಚ್ಚರಿಗೆ ನೂಕಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ, ಚೈತ್ರಾಗೆ ಪಿಟ್ಸ್ ಆಗಲೀ, ಬೇರಾವುದೇ ಸಮಸ್ಯೆ ಆಗಲೀ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನೇ ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಇನ್ನೂ ಕೆಲಕಾಲ ಆಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಆರೋಗ್ಯ ಸ್ಥಿರವಾಗಿದೆ. ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಎಲ್ಲಾ ಟೆಸ್ಟ್ನಲ್ಲೂ ನಾರ್ಮಲ್ ಇದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದಿದ್ದಾರೆ. ಹೀಗಿದ್ದರೂ, ಚೈತ್ರಾ ತನಗೆ ಮಾತು ಬಾರದ ರೀತಿ ಆಸ್ಪತ್ರೆಯಲ್ಲಿ ನಾಟಕವಾಡಿದ್ದಾರೆ. ಯಾವುದಕ್ಕೂ ಮಾತನಾಡಲು ಆಗಲ್ಲ ಎಂದು ಕೈಸನ್ನೆ ಮಾಡುತ್ತಿದ್ದಾರಂತೆ. ಇದರಿಂದ ವೈದ್ಯರು ಮತ್ತು ಪೊಲೀಸರು ಕೂಡ ರೋಸಿ ಹೋಗಿದ್ದಾರೆ.
Chaitra Kundapura normal in hospital, doctors state she drank soap water, drama at hospital.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm