ಬ್ರೇಕಿಂಗ್ ನ್ಯೂಸ್
15-09-23 09:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಚೈತ್ರಾ ಕುಂದಾಪುರ ಬಾಯಲ್ಲಿ ನೊರೆ ಬಂದ ರೀತಿ ಕುಸಿದು ಬಿದ್ದು ಅಧಿಕಾರಿಗಳನ್ನೇ ಅಚ್ಚರಿಗೆ ನೂಕಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ, ಚೈತ್ರಾಗೆ ಪಿಟ್ಸ್ ಆಗಲೀ, ಬೇರಾವುದೇ ಸಮಸ್ಯೆ ಆಗಲೀ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನೇ ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಇನ್ನೂ ಕೆಲಕಾಲ ಆಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಆರೋಗ್ಯ ಸ್ಥಿರವಾಗಿದೆ. ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಎಲ್ಲಾ ಟೆಸ್ಟ್ನಲ್ಲೂ ನಾರ್ಮಲ್ ಇದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದಿದ್ದಾರೆ. ಹೀಗಿದ್ದರೂ, ಚೈತ್ರಾ ತನಗೆ ಮಾತು ಬಾರದ ರೀತಿ ಆಸ್ಪತ್ರೆಯಲ್ಲಿ ನಾಟಕವಾಡಿದ್ದಾರೆ. ಯಾವುದಕ್ಕೂ ಮಾತನಾಡಲು ಆಗಲ್ಲ ಎಂದು ಕೈಸನ್ನೆ ಮಾಡುತ್ತಿದ್ದಾರಂತೆ. ಇದರಿಂದ ವೈದ್ಯರು ಮತ್ತು ಪೊಲೀಸರು ಕೂಡ ರೋಸಿ ಹೋಗಿದ್ದಾರೆ.
Chaitra Kundapura normal in hospital, doctors state she drank soap water, drama at hospital.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm