ಬ್ರೇಕಿಂಗ್ ನ್ಯೂಸ್
19-09-23 12:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರಿನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ರು, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.
ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.
ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ನೆರವಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
Chaitra Kundapura fraud case, Main accused Abinava Halashri swamiji arrested at Odisha by CCB police. He was been absconding from the day the case was registered, finally the Bangalore CCB police have nabbed him in Odisha at a private lodge.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 04:14 pm
Mangalore Correspondent
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm