ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.

ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm