ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.

ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm