ಬ್ರೇಕಿಂಗ್ ನ್ಯೂಸ್
20-09-23 10:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.20: ಸ್ವಯಂಘೋಷಿತ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಪ್ರಣವಾನಂದ ಸ್ವಾಮೀಜಿಗಳು ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿಗಳೆಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಡಿಗ ಸಮುದಾಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಅವರು ರಾಜಕೀಯ ಮುಖಂಡರಲ್ಲಿ ಬಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಮೂಡಿಸುತ್ತಿರುವುದು ಸರಿಯಲ್ಲ. ನಮ್ಮ ಕೇಂದ್ರ ಸಂಘ ಹಾಗೂ ಜಿಲ್ಲಾ ಸಂಘಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ʼಈಡಿಗ ಸಮುದಾಯ ಸಂಘ ಸ್ಥಾಪನೆಯಾಗಿ 78 ವರ್ಷಗಳು ಕಳೆದಿವೆ. 2008ರಲ್ಲಿ ರೇಣುಕಾನಂದ ಎಂಬವರನ್ನು ಸ್ವಾಮೀಜಿಗಳನ್ನಾಗಿ ನೇಮಕ ಮಾಡಲಾಯಿತು. ಬಳಿಕ ರೇಣುಕಾನಂದರವರು ತಮ್ಮ ಹೆಚ್ಚಿನ ಆಧ್ಯಾತ್ಮಿಕ ಅಧ್ಯಯನಕ್ಕಾಗಿ 2014 ರಲ್ಲಿ ಪೀಠವನ್ನು ತ್ಯಜಿಸಿದರು. ಪ್ರಸ್ತುತ ಬಿ.ಕೆ.ಹರಿಪ್ರಸಾದ್ ಅವರ ಒಪ್ಪಿಗೆ ಮೇರೆಗೆ ವಿಖ್ಯಾತಾನಂದ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ಆದರೆ ಪ್ರಣವಾನಂದ ಅನಧಿಕೃತವಾಗಿ ಈಡಿಗ ಸ್ವಾಮೀಜಿಗಳೆಂದು ಹೇಳಿಕೊಂಡು ಜನಾಂಗವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀಧರ್, ರಾಮನಗರ, ಚಿತ್ರದುರ್ಗ, ಬೆಳಗಾವಿ ಜಿಲ್ಲಾ ಅಧ್ಯಕ್ಷರು, ಬಿಲ್ಲವ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಾಮಧಾರಿ ದೀವರ ಅಧ್ಯಕ್ಷರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
Karnataka Idiga community slams Pranavananda swami says he doesn't belong to Idiga.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm