ಬ್ರೇಕಿಂಗ್ ನ್ಯೂಸ್
21-09-23 08:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳಿಂದ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಇತರ ಆಸ್ತಿ ಹಾಗೂ 76 ಲಕ್ಷ ರೂಪಾಯಿ ನಗದು ಮೊತ್ತವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಹಾಲಶ್ರೀ ಮಠದಲ್ಲಿ 56 ಲಕ್ಷ ರೂ. ನಗದು ಪತ್ತೆಯಾಗಿದೆ. ಆನಂತರ, ಸ್ವಾಮೀಜಿಗೆ ಸಂಬಂಧಪಟ್ಟ ವ್ಯಕ್ತಿಯ ಬಳಿಯಲ್ಲಿದ್ದ 20 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಈವರೆಗೆ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದಲ್ಲದೆ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸೇರಿದಂತೆ ನಾಲ್ಕು ಮಂದಿಗೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹಿರೇಹಡಗಲಿ ಮಠದ ಬಳಿಯೇ ಸ್ವಾಮೀಜಿ ಕೃಷಿ ಭೂಮಿ ಖರೀದಿಸಿದ್ದು ಅದಕ್ಕಾಗಿ 20 ಲಕ್ಷ ಅಡ್ವಾನ್ಸ್ ನೀಡಿದ್ದರು. ಆ ಮೊತ್ತವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳೆಲ್ಲ ಇತ್ತೀಚೆಗೆ ಐಷಾರಾಮಿ ಜೀವನ ನಡೆಸುತ್ತಿರುವುದು ಆಪ್ತರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಅವರ ಖಾತೆಗಳನ್ನು ಜಪ್ತಿ ಮಾಡಿದ್ದು ಬೇರೆಯವರ ಹೆಸರಲ್ಲಿ ಬೇನಾಮಿ ಆಸ್ತಿ ಖರೀದಿಸಿದ್ದರೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.


ಇತ್ತೀಚೆಗೆ ಇದೇ ಪ್ರಕರಣದ ಬಗ್ಗೆ ಸುದ್ದಿಗೋಷ್ಟಿ ನಡೆಸಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಒಟ್ಟು 185 ಕೋಟಿ ರೂಪಾಯಿ ಅವ್ಯವಹಾರ ಆಗಿದ್ದು, ಇದರಲ್ಲಿ ಬಿಜೆಪಿಯ ದೊಡ್ಡ ದೊಡ್ಡವರು ಶಾಮೀಲಾಗಿದ್ದಾರೆ. ಚೈತ್ರಾ ಕುಂದಾಪುರ ಮತ್ತು ತಂಡ ವ್ಯವಸ್ಥಿತವಾಗಿ ಹಲವರನ್ನು ಮೋಸಕ್ಕೆ ಬೀಳಿಸಿದೆ. 17 ಮಂದಿ ಮೋಸಕ್ಕೆ ಒಳಗಾಗಿದ್ದರೆ, ಇವರ ತಂಡದಿಂದ ಹಣ ಕೊಟ್ಟಿದ್ದ 23 ಮಂದಿಗೆ ಟಿಕೆಟ್ ಸಿಕ್ಕಿತ್ತು ಎಂದಿದ್ದರು. ಅಲ್ಲದೆ, ಸಿಎಂ ಸಿದ್ದರಾಮಯ್ಯ ಬಳಿಗೆ ನಿಯೋಗ ತೆರಳಿ ಈ ಹಗರಣದ ಬಗ್ಗೆ ಪ್ರತ್ಯೇಕ ತಂಡದಿಂದ ತನಿಖೆ ನಡೆಸುವಂತೆ ಕೋರುತ್ತೇವೆ ಎಂದಿದ್ದರು. ಡೀಲ್ ಪ್ರಕರಣದಲ್ಲಿ ಮಾಹಿತಿ ಇದ್ದರೆ ಹಂಚಿಕೊಳ್ಳುವಂತೆ ಸೂಚಿಸಿ ಸಿಸಿಬಿ ಪೊಲೀಸರು ಈಗ ನೋಟೀಸ್ ಜಾರಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 72 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಕೊನೆಯ ಕ್ಷಣದಲ್ಲಿ ಇವೆಲ್ಲ ಬದಲಾವಣೆ ಆಗಿದ್ದು, ಇದರಿಂದಾಗಿಯೇ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಟಿಕೆಟ್ ಡೀಲ್ ಪ್ರಕರಣ ಹೊರ ಬಿದ್ದಿರುವುದರಿಂದ ಬಿಜೆಪಿ ನಾಯಕರು ತೀವ್ರ ಮುಜುಗರ ಅನುಭವಿಸಿದ್ದಾರೆ.
Chaitra Kundapura fraud case, two crores worth gold seized, Lakshman gets notice by CCB for alleging 185 crore fraud
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm