ಬ್ರೇಕಿಂಗ್ ನ್ಯೂಸ್
21-09-23 08:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳಿಂದ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಇತರ ಆಸ್ತಿ ಹಾಗೂ 76 ಲಕ್ಷ ರೂಪಾಯಿ ನಗದು ಮೊತ್ತವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಹಾಲಶ್ರೀ ಮಠದಲ್ಲಿ 56 ಲಕ್ಷ ರೂ. ನಗದು ಪತ್ತೆಯಾಗಿದೆ. ಆನಂತರ, ಸ್ವಾಮೀಜಿಗೆ ಸಂಬಂಧಪಟ್ಟ ವ್ಯಕ್ತಿಯ ಬಳಿಯಲ್ಲಿದ್ದ 20 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ. ಈವರೆಗೆ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದಲ್ಲದೆ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸೇರಿದಂತೆ ನಾಲ್ಕು ಮಂದಿಗೆ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹಿರೇಹಡಗಲಿ ಮಠದ ಬಳಿಯೇ ಸ್ವಾಮೀಜಿ ಕೃಷಿ ಭೂಮಿ ಖರೀದಿಸಿದ್ದು ಅದಕ್ಕಾಗಿ 20 ಲಕ್ಷ ಅಡ್ವಾನ್ಸ್ ನೀಡಿದ್ದರು. ಆ ಮೊತ್ತವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳೆಲ್ಲ ಇತ್ತೀಚೆಗೆ ಐಷಾರಾಮಿ ಜೀವನ ನಡೆಸುತ್ತಿರುವುದು ಆಪ್ತರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಅವರ ಖಾತೆಗಳನ್ನು ಜಪ್ತಿ ಮಾಡಿದ್ದು ಬೇರೆಯವರ ಹೆಸರಲ್ಲಿ ಬೇನಾಮಿ ಆಸ್ತಿ ಖರೀದಿಸಿದ್ದರೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಇತ್ತೀಚೆಗೆ ಇದೇ ಪ್ರಕರಣದ ಬಗ್ಗೆ ಸುದ್ದಿಗೋಷ್ಟಿ ನಡೆಸಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಒಟ್ಟು 185 ಕೋಟಿ ರೂಪಾಯಿ ಅವ್ಯವಹಾರ ಆಗಿದ್ದು, ಇದರಲ್ಲಿ ಬಿಜೆಪಿಯ ದೊಡ್ಡ ದೊಡ್ಡವರು ಶಾಮೀಲಾಗಿದ್ದಾರೆ. ಚೈತ್ರಾ ಕುಂದಾಪುರ ಮತ್ತು ತಂಡ ವ್ಯವಸ್ಥಿತವಾಗಿ ಹಲವರನ್ನು ಮೋಸಕ್ಕೆ ಬೀಳಿಸಿದೆ. 17 ಮಂದಿ ಮೋಸಕ್ಕೆ ಒಳಗಾಗಿದ್ದರೆ, ಇವರ ತಂಡದಿಂದ ಹಣ ಕೊಟ್ಟಿದ್ದ 23 ಮಂದಿಗೆ ಟಿಕೆಟ್ ಸಿಕ್ಕಿತ್ತು ಎಂದಿದ್ದರು. ಅಲ್ಲದೆ, ಸಿಎಂ ಸಿದ್ದರಾಮಯ್ಯ ಬಳಿಗೆ ನಿಯೋಗ ತೆರಳಿ ಈ ಹಗರಣದ ಬಗ್ಗೆ ಪ್ರತ್ಯೇಕ ತಂಡದಿಂದ ತನಿಖೆ ನಡೆಸುವಂತೆ ಕೋರುತ್ತೇವೆ ಎಂದಿದ್ದರು. ಡೀಲ್ ಪ್ರಕರಣದಲ್ಲಿ ಮಾಹಿತಿ ಇದ್ದರೆ ಹಂಚಿಕೊಳ್ಳುವಂತೆ ಸೂಚಿಸಿ ಸಿಸಿಬಿ ಪೊಲೀಸರು ಈಗ ನೋಟೀಸ್ ಜಾರಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 72 ಮಂದಿ ಹೊಸಬರಿಗೆ ಟಿಕೆಟ್ ನೀಡಲಾಗಿತ್ತು. ಕೊನೆಯ ಕ್ಷಣದಲ್ಲಿ ಇವೆಲ್ಲ ಬದಲಾವಣೆ ಆಗಿದ್ದು, ಇದರಿಂದಾಗಿಯೇ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಟಿಕೆಟ್ ಡೀಲ್ ಪ್ರಕರಣ ಹೊರ ಬಿದ್ದಿರುವುದರಿಂದ ಬಿಜೆಪಿ ನಾಯಕರು ತೀವ್ರ ಮುಜುಗರ ಅನುಭವಿಸಿದ್ದಾರೆ.
Chaitra Kundapura fraud case, two crores worth gold seized, Lakshman gets notice by CCB for alleging 185 crore fraud
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm