ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm