ಬ್ರೇಕಿಂಗ್ ನ್ಯೂಸ್
25-09-23 07:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬೆಂಗಳೂರು ನಗರವನ್ನು ಬಂದ್ ಮಾಡಲು ಅವಕಾಶ ನೀಡೋದಿಲ್ಲ. ಅಲ್ಲದೆ, ಯಾವುದೇ ರೀತಿಯ ಮೆರವಣಿಗೆ, ಸಭೆ ನಡೆಸುವುದಕ್ಕೂ ಅವಕಾಶ ಇರಲ್ಲ. ಇದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ ಯಾವುದೇ ರೀತಿಯ ಬಂದ್ ಗೆ ಅವಕಾಶ ನೀಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದರೆ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಬಂದ್ ಕರೆ ಕೊಟ್ಟವರೇ ಹೊಣೆಯಾಗುತ್ತಾರೆ ಎಂದು ತಿಳಿಸಿದರು.
ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಒತ್ತಾಯಪೂರ್ವಕ ಬಂದ್ ಮಾಡುವಂತಿಲ್ಲ. ಹಾಗೊಂದ್ವೇಳೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಬಿಜೆಪಿ, ಆಪ್, ಜೆಡಿಎಸ್ ಸೇರಿದಂತೆ ವಿಪಕ್ಷಗಳು ಬಂದ್ ಗೆ ಬೆಂಬಲ ಘೋಷಿಸಿವೆ. ಬೆಂಗಳೂರು ಮಹಾನಗರವಾಗಿದ್ದು ಒಂದು ದಿನ ಪೂರ್ತಿ ಬಂದ್ ಆದಲ್ಲಿ ದೊಡ್ಡ ಮಟ್ಟದ ನಷ್ಟ ಆಗುತ್ತದೆ. ಈ ಹಿನ್ನೆಲೆ ನಗರ ಪೂರ್ತಿ ಬಂದ್ ಆಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಟ್ಟೆಚ್ಚರ ವಹಿಸಿದ್ದೇವೆ. ಒತ್ತಾಯದ ಬಂದ್ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Bengaluru Police Commissioner B Dayananda on Monday said that the bandh in the city on Tuesday would not be permitted and the same had been communicated to the organisers. Addressing a news conference, he said prohibitory orders would be in place from Tuesday midnight to Wednesday midnight.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm