ಬ್ರೇಕಿಂಗ್ ನ್ಯೂಸ್
26-09-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.26: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ಗೆ ಕರೆ ನೀಡಿದ ಹಿನ್ನೆಲೆ ರೈತರು ಹಾಗೂ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭ ಪೊಲೀಸರು ಹಲವು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಬಂದ್ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ಗೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ. ಬಂದ್ ಯಶಸ್ವಿಯಾಗಲಿ. ಜನತಾದಳ ಪಕ್ಷದ ಕಾರ್ಯಕರ್ತರೂ ಕೂಡ ಬಂದ್ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
Farmers and pro-Kannada activists are protesting against the Bengaluru bandh called for cauvery water. Former Chief Minister HD Kumaraswamy took to Twitter to express his anger over the detention of several activists and leaders by the police.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm