ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm