ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm