ಬ್ರೇಕಿಂಗ್ ನ್ಯೂಸ್
01-10-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ.
ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್ಪಾತ್ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್ ಪಾತ್ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಕನ್ನಡದಲ್ಲಿ ಹಿಟ್ ಆಗಿರುವ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಾಗಭೂಷಣ್ ನಟಿಸಿ ಜನಮೆಚ್ಚುಗೆ ಗಳಿಸಿದ್ದರು.
Kannada film star Nagabhushana NS' car that was involved in the deadly accident on Vasanthapura Main Road late on Saturday night.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm