ಬ್ರೇಕಿಂಗ್ ನ್ಯೂಸ್
02-10-23 12:31 pm HK News Desk ಕರ್ನಾಟಕ
ಶಿವಮೊಗ್ಗ, ಅ.2: ಭಾನುವಾರ ಸಂಜೆ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದಾಗ ಶಿವಮೊಗ್ಗ ನಗರದ ರಾಗಿಗುಡ್ಡ ರಸ್ತೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು ಇದರ ಬೆನ್ನಲ್ಲೇ ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಭೇಟಿ ನೀಡಿದ್ದಾರೆ. ಅಲ್ಲದೇ ಆರ್ಎಎಫ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಕಲ್ಲು ತೂರಾಟ ಘಟನೆಯಲ್ಲಿ ಐದಾರು ಮಂದಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಲೇ ಕಲ್ಲು ತೂರಾಟ ನಡೆದಿತ್ತು. ಉದ್ರಿಕ್ತರನ್ನು ಚದುರಿಸಿ ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಮೇಲೆಯೂ ಕಲ್ಲು ತೂರಿದ್ದು ಎಷ್ಟು ಮಂದಿ ಗಾಯಗೊಂಡಿದ್ದಾರೆಂಬ ಮಾಹಿತಿ ನೀಡಿಲ್ಲ.




ಘರ್ಷಣೆ ನಡೆದ ಸ್ಥಳಗಳಿಗೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈ ವೇಳೆ, ಪೊಲೀಸರು ಹೋಗುತ್ತಿದ್ದಂತಯೇ ಅವರ ಮೇಲೆ ಕಲ್ಲು ಬೀಸಿದ್ದರು. ಸ್ಥಳದಲ್ಲಿ ಸೀಮಿತ ಸಂಖ್ಯೆಯಲ್ಲಿದ್ದ ಪೊಲೀಸರು ಅಲ್ಲಿಂದ ವಾಪಸ್ ಆಗಿದ್ದರು. ಕೆಲವೇ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬಂದಿ ಆಗಮಿಸಿದ್ದು ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲು ತೂರಾಟ ಘಟನೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋ, ಕಾರು, ಬೈಕ್ಗಳಿಗೂ ಹಾನಿಯಾಗಿವೆ.
ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು ಎರಡು ಗುಂಪುಗಳ ಜೊತೆ ಮಾತನಾಡಿದ್ದೇನೆ. ಮೆರವಣಿಗೆ ವೇಳೆ ಯುವಕರ ಗುಂಪು ದಾಂಧಲೆ ನಡೆಸಿದೆ. ಘಟನೆಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ವಾಹನಗಳಿಗೆ ಹಾನಿಯಾಗಿರುವ ಕುರಿತು ದೂರ ನೀಡಲು ತಿಳಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗೂ ಗಾಯಗಳಾಗಿವೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Communal violence erupted in Shivamogga, IGP visits spot, stone pelted on 7 houses, RAP on spot, many taken to custody.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm