ಬ್ರೇಕಿಂಗ್ ನ್ಯೂಸ್
03-10-23 03:17 pm HK News Desk ಕರ್ನಾಟಕ
ಶಿವಮೊಗ್ಗ, ಅ.3: ಶಿವಮೊಗ್ಗ ನಗರದ ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಅದ್ಧೂರಿಯಾಗಿ ನಡೆದಿದೆ. ಆದರೆ, ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಭೆ ನಡೆದಿದೆ. ಘಟನೆ ಸಂಬಂಧಿಸಿ ಈಗಾಗಲೇ 60 ಜನರನ್ನು ಬಂಧಿಸಲಾಗಿದೆ. 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಘಟನೆ ನಡೆಯಬಾರದಿತ್ತು. ಘಟನೆ ನಡೆದಿರುವುದಕ್ಕೆ ನನಗೆ ವಿಷಾದವಿದೆ. ಶಿವಮೊಗ್ಗದ ಹಿನ್ನೆಲೆ ಗಮನಿಸಿ ಗಲಭೆ ನಡೆದ ಪ್ರದೇಶದಲ್ಲಿ 144 ಸೆಕ್ಷನ್ ವಿಧಿಸಲಾಗಿದೆ. ಆದರೆ, ರಾಗಿಗುಡ್ಡ ಹೊರತುಪಡಿಸಿ ಬಾಕಿ ಕಡೆ ಸಡಿಲಗೊಳಿಸಲಾಗಿದೆ. ಮತ್ತೆ ಯಾವುದೇ ಘಟನೆ ನಡೆಯಬಾರದು ಎಂದು ಸೆಕ್ಷನ್ ಬಿಗಿ ಮಾಡಲಾಗಿದೆ ಎಂದ ಅವರು, ಹೊರಗಿನಿಂದ ಬಂದವರು ಕಲ್ಲು ತೂರಾಟ ನಡೆಸಿದ್ದಾರೆಂಬುದರ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಿವಮೊಗ್ಗ ಜನತೆಗೆ ನಾನು ಮನವಿ ಮಾಡುತ್ತೇನೆ. ನಗರದಲ್ಲಿ ಶಾಂತಿ ಕಾಪಾಡಬೇಕು. ಕಾನೂನು ಬದ್ಧವಾಗಿರುವ ಬಂಟಿಂಗ್ಸ್, ಬ್ಯಾನರ್ ಅಳವಡಿಸಲು ಅವಕಾಶವಿದೆ. ಸಂಪ್ರದಾಯ ಪ್ರದರ್ಶನ ಮಾಡುವ ಬಗ್ಗೆ ಯಾವುದೇ ವಿರೋಧವಿಲ್ಲ. ರಾಗಿಗುಡ್ಡದಲ್ಲಿ ನಾನು ಕೆಲವಾರು ಮನೆಗಳಿಗೆ ಭೇಟಿ ನೀಡಿದ್ದು ಒಡೆದು ಹಾಕಿದ್ದನ್ನು ನೋಡಿದೆ. ಇದನ್ನು ನೋಡಿದಾಗ ಬೇಸರವಾಗುತ್ತೆ. ನಮ್ಮ, ನಿಮ್ಮ ಮನೆಗಳನ್ನು ಒಡೆದಾಗ ಬೇಸರವಾಗುವುದಿಲ್ಲವೇ.. ಪಾಪ ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿರುತ್ತಾರೆ.
ಯಾರಿಂದಲೂ ಯಾರಿಗೂ ತೊಂದರೆಯಾಗಬಾರದು. ಕೆಲವು ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದಾರೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಕಾನೂನಿನಲ್ಲಿ ಅವಕಾಶವಿದ್ರೆ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ಇಲ್ಲವಾದರೆ ನಾವು ಸೇರಿ ಕೊಡ್ತೆವೆ. ಶಿವಮೊಗ್ಗ ಶಾಂತಿಯಿಂದ ಇರಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದಿದ್ದಾರೆ.
Speaking to presspersons at the hospital, the minister said that he visited the violence-hit areas as a representative of the government, not as a politician. “Everybody is equal before the government and the law. The police have arrested 60 people and registered 24 cases. They have taken steps necessary to ensure peace in the city,” he said.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm