ಬ್ರೇಕಿಂಗ್ ನ್ಯೂಸ್
03-10-23 10:37 pm Bengaluru Correspondent ಕರ್ನಾಟಕ
ಕೋಲಾರ, ಅ.3: ನನ್ನ ಜಿಲ್ಲೆಯ ಜನರ ವಿರೋಧ ಇದ್ದರೂ, ಕೋಲಾರ, ಚಿಕ್ಕಬಳ್ಳಾಪುರ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿದ್ದೆ. 800 ಕೋಟಿ ರೂಪಾಯಿ ಮೊತ್ತದಲ್ಲಿ ಡಿಪಿಆರ್ ತಯಾರಿಸಿ ಯೋಜನೆ ಜಾರಿ ಮಾಡಿದ್ದೆ. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಅದು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದು ಬಿಟ್ಟರೆ ನೀರು ತರಲು ಮುಂದಾಗಿಲ್ಲ. ಯೋಜನೆ ಹೆಸರಲ್ಲಿ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೊರಕ್ಕೆ ತಳ್ಳಿದ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸದಾನಂದ ಗೌಡ ತನ್ನ ಸಾಧನೆಯನ್ನು ಹೇಳಿಕೊಂಡಿದ್ದಾರೆ.
ಇವತ್ತು ಕೋಲಾರದ ಜನ ಕುಡಿಯಲು ನೀರಿಲ್ಲದಿದ್ದರೂ ಹನಿ ನೀರಾವರಿ ಮೂಲಕ ಕೃಷಿ ಮಾಡಿ, ಬೆಂಗಳೂರಿನ ಜನರಿಗೆ ತರಕಾರಿ ಪೂರೈಸುತ್ತಿದ್ದಾರೆ. ಇಲ್ಲಿನ ಜನರಿಗೆ ನೀರು ಕೊಡಬೇಕೆಂದು ಎತ್ತಿನಹೊಳೆ ಯೋಜನೆಯನ್ನು ತಯಾರಿಸಿದ್ದು ನಾವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಆಡಳಿತ ನಡೆಸಿತಲ್ಲಾ.. ಯಾಕೆ ಇವರಿಗೆ ಆ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಯೋಜನೆಯನ್ನು ಜಾರಿಗೆ ತರುತ್ತಿದ್ದರೆ ಕೋಲಾರದ ಕೆರೆಗಳು ತುಂಬುತ್ತಿತ್ತಲ್ಲಾ.. ಇವರು ಆ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನ ಮಾಡಿದರು. ಜೊತೆ ಜೊತೆಗೆ ಯೋಜನೆ ಹೆಸರಲ್ಲಿ ದುಡ್ಡು ಲೂಟಿ ಹೊಡೆದಿದ್ದಾರೆ. ಕಾಂಗ್ರೆಸಿನವರು ಲೂಟಿಕೋರರು ಎಂದು ಆರೋಪಿಸಿದರು.
ಯೋಜನೆ ನಿರ್ಮಾತೃಗಳು ಡೀವಿ, ಮೊಯ್ಲಿ
2011ರಲ್ಲಿ ಕರಾವಳಿ ಜಿಲ್ಲೆಗಳ ವಿರೋಧದ ನಡುವೆಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿವಿ ಸದಾನಂದ ಗೌಡ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದರು. ಆನಂತರ, 2012ರಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ಶಿಲಾನ್ಯಾಸ ಮಾಡಿ, ಮತ್ತೊಂದು ಎಡವಟ್ಟು ಮಾಡಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಯೋಜನೆಗೆ ಹಣ ಬಿಡುಗಡೆಗೊಳಿಸಿ, ಅನುಷ್ಠಾನಕ್ಕೆ ಯತ್ನಿಸಿದ್ದರು. ಆದರೆ ಬಹುತೇಕ ಜಲತಜ್ಞರು ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲ್ಲ ಎಂದು ಹೇಳಿದರೂ ಸರಕಾರ ಕೇಳಿರಲಿಲ್ಲ. ಯೋಜನೆ ಹೆಸರಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷ ಭೇದ ಇಲ್ಲದೆ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ನೀರು ಒಯ್ಯುವ ಕೆಲಸ ಮಾಡಿಲ್ಲ. ಈಗ ಅಂದಿನ ಸಿಎಂ ಸದಾನಂದ ಗೌಡ ಯಾವುದೇ ನಾಚಿಕೆ ಇಲ್ಲದೆ, ತಾನು ಜಾರಿಗೊಳಿಸಿದ್ದ ಯೋಜನೆಯ ಹೆಸರಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ಜನರನ್ನು ಪ್ರತಿ ಬಾರಿ ಮೋಸ ಮಾಡುತ್ತಿದ್ದಾರೆ.
Mangalore Sadananda Gowda talks about Yettinahole water project in kolar
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm