ಬ್ರೇಕಿಂಗ್ ನ್ಯೂಸ್
03-10-23 10:37 pm Bengaluru Correspondent ಕರ್ನಾಟಕ
ಕೋಲಾರ, ಅ.3: ನನ್ನ ಜಿಲ್ಲೆಯ ಜನರ ವಿರೋಧ ಇದ್ದರೂ, ಕೋಲಾರ, ಚಿಕ್ಕಬಳ್ಳಾಪುರ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿದ್ದೆ. 800 ಕೋಟಿ ರೂಪಾಯಿ ಮೊತ್ತದಲ್ಲಿ ಡಿಪಿಆರ್ ತಯಾರಿಸಿ ಯೋಜನೆ ಜಾರಿ ಮಾಡಿದ್ದೆ. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಅದು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದು ಬಿಟ್ಟರೆ ನೀರು ತರಲು ಮುಂದಾಗಿಲ್ಲ. ಯೋಜನೆ ಹೆಸರಲ್ಲಿ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೊರಕ್ಕೆ ತಳ್ಳಿದ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸದಾನಂದ ಗೌಡ ತನ್ನ ಸಾಧನೆಯನ್ನು ಹೇಳಿಕೊಂಡಿದ್ದಾರೆ.
ಇವತ್ತು ಕೋಲಾರದ ಜನ ಕುಡಿಯಲು ನೀರಿಲ್ಲದಿದ್ದರೂ ಹನಿ ನೀರಾವರಿ ಮೂಲಕ ಕೃಷಿ ಮಾಡಿ, ಬೆಂಗಳೂರಿನ ಜನರಿಗೆ ತರಕಾರಿ ಪೂರೈಸುತ್ತಿದ್ದಾರೆ. ಇಲ್ಲಿನ ಜನರಿಗೆ ನೀರು ಕೊಡಬೇಕೆಂದು ಎತ್ತಿನಹೊಳೆ ಯೋಜನೆಯನ್ನು ತಯಾರಿಸಿದ್ದು ನಾವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಆಡಳಿತ ನಡೆಸಿತಲ್ಲಾ.. ಯಾಕೆ ಇವರಿಗೆ ಆ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಯೋಜನೆಯನ್ನು ಜಾರಿಗೆ ತರುತ್ತಿದ್ದರೆ ಕೋಲಾರದ ಕೆರೆಗಳು ತುಂಬುತ್ತಿತ್ತಲ್ಲಾ.. ಇವರು ಆ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನ ಮಾಡಿದರು. ಜೊತೆ ಜೊತೆಗೆ ಯೋಜನೆ ಹೆಸರಲ್ಲಿ ದುಡ್ಡು ಲೂಟಿ ಹೊಡೆದಿದ್ದಾರೆ. ಕಾಂಗ್ರೆಸಿನವರು ಲೂಟಿಕೋರರು ಎಂದು ಆರೋಪಿಸಿದರು.

ಯೋಜನೆ ನಿರ್ಮಾತೃಗಳು ಡೀವಿ, ಮೊಯ್ಲಿ
2011ರಲ್ಲಿ ಕರಾವಳಿ ಜಿಲ್ಲೆಗಳ ವಿರೋಧದ ನಡುವೆಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿವಿ ಸದಾನಂದ ಗೌಡ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದರು. ಆನಂತರ, 2012ರಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ಶಿಲಾನ್ಯಾಸ ಮಾಡಿ, ಮತ್ತೊಂದು ಎಡವಟ್ಟು ಮಾಡಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಯೋಜನೆಗೆ ಹಣ ಬಿಡುಗಡೆಗೊಳಿಸಿ, ಅನುಷ್ಠಾನಕ್ಕೆ ಯತ್ನಿಸಿದ್ದರು. ಆದರೆ ಬಹುತೇಕ ಜಲತಜ್ಞರು ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲ್ಲ ಎಂದು ಹೇಳಿದರೂ ಸರಕಾರ ಕೇಳಿರಲಿಲ್ಲ. ಯೋಜನೆ ಹೆಸರಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷ ಭೇದ ಇಲ್ಲದೆ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ನೀರು ಒಯ್ಯುವ ಕೆಲಸ ಮಾಡಿಲ್ಲ. ಈಗ ಅಂದಿನ ಸಿಎಂ ಸದಾನಂದ ಗೌಡ ಯಾವುದೇ ನಾಚಿಕೆ ಇಲ್ಲದೆ, ತಾನು ಜಾರಿಗೊಳಿಸಿದ್ದ ಯೋಜನೆಯ ಹೆಸರಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ಜನರನ್ನು ಪ್ರತಿ ಬಾರಿ ಮೋಸ ಮಾಡುತ್ತಿದ್ದಾರೆ.
Mangalore Sadananda Gowda talks about Yettinahole water project in kolar
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm