ಬ್ರೇಕಿಂಗ್ ನ್ಯೂಸ್
03-10-23 10:37 pm Bengaluru Correspondent ಕರ್ನಾಟಕ
ಕೋಲಾರ, ಅ.3: ನನ್ನ ಜಿಲ್ಲೆಯ ಜನರ ವಿರೋಧ ಇದ್ದರೂ, ಕೋಲಾರ, ಚಿಕ್ಕಬಳ್ಳಾಪುರ ಜನರಿಗೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿದ್ದೆ. 800 ಕೋಟಿ ರೂಪಾಯಿ ಮೊತ್ತದಲ್ಲಿ ಡಿಪಿಆರ್ ತಯಾರಿಸಿ ಯೋಜನೆ ಜಾರಿ ಮಾಡಿದ್ದೆ. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಅದು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದು ಬಿಟ್ಟರೆ ನೀರು ತರಲು ಮುಂದಾಗಿಲ್ಲ. ಯೋಜನೆ ಹೆಸರಲ್ಲಿ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರನ್ನು ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೊರಕ್ಕೆ ತಳ್ಳಿದ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸದಾನಂದ ಗೌಡ ತನ್ನ ಸಾಧನೆಯನ್ನು ಹೇಳಿಕೊಂಡಿದ್ದಾರೆ.
ಇವತ್ತು ಕೋಲಾರದ ಜನ ಕುಡಿಯಲು ನೀರಿಲ್ಲದಿದ್ದರೂ ಹನಿ ನೀರಾವರಿ ಮೂಲಕ ಕೃಷಿ ಮಾಡಿ, ಬೆಂಗಳೂರಿನ ಜನರಿಗೆ ತರಕಾರಿ ಪೂರೈಸುತ್ತಿದ್ದಾರೆ. ಇಲ್ಲಿನ ಜನರಿಗೆ ನೀರು ಕೊಡಬೇಕೆಂದು ಎತ್ತಿನಹೊಳೆ ಯೋಜನೆಯನ್ನು ತಯಾರಿಸಿದ್ದು ನಾವು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐದು ವರ್ಷ ಆಡಳಿತ ನಡೆಸಿತಲ್ಲಾ.. ಯಾಕೆ ಇವರಿಗೆ ಆ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಯೋಜನೆಯನ್ನು ಜಾರಿಗೆ ತರುತ್ತಿದ್ದರೆ ಕೋಲಾರದ ಕೆರೆಗಳು ತುಂಬುತ್ತಿತ್ತಲ್ಲಾ.. ಇವರು ಆ ಯೋಜನೆಯನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನ ಮಾಡಿದರು. ಜೊತೆ ಜೊತೆಗೆ ಯೋಜನೆ ಹೆಸರಲ್ಲಿ ದುಡ್ಡು ಲೂಟಿ ಹೊಡೆದಿದ್ದಾರೆ. ಕಾಂಗ್ರೆಸಿನವರು ಲೂಟಿಕೋರರು ಎಂದು ಆರೋಪಿಸಿದರು.

ಯೋಜನೆ ನಿರ್ಮಾತೃಗಳು ಡೀವಿ, ಮೊಯ್ಲಿ
2011ರಲ್ಲಿ ಕರಾವಳಿ ಜಿಲ್ಲೆಗಳ ವಿರೋಧದ ನಡುವೆಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿವಿ ಸದಾನಂದ ಗೌಡ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿದ್ದರು. ಆನಂತರ, 2012ರಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ಶಿಲಾನ್ಯಾಸ ಮಾಡಿ, ಮತ್ತೊಂದು ಎಡವಟ್ಟು ಮಾಡಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಯೋಜನೆಗೆ ಹಣ ಬಿಡುಗಡೆಗೊಳಿಸಿ, ಅನುಷ್ಠಾನಕ್ಕೆ ಯತ್ನಿಸಿದ್ದರು. ಆದರೆ ಬಹುತೇಕ ಜಲತಜ್ಞರು ಎತ್ತಿನಹೊಳೆ ಯೋಜನೆಯಿಂದ ನೀರು ಸಿಗಲ್ಲ ಎಂದು ಹೇಳಿದರೂ ಸರಕಾರ ಕೇಳಿರಲಿಲ್ಲ. ಯೋಜನೆ ಹೆಸರಲ್ಲಿ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಕ್ಷ ಭೇದ ಇಲ್ಲದೆ ಹಣ ಕೊಳ್ಳೆ ಹೊಡೆದಿದ್ದು ಬಿಟ್ಟರೆ ನೀರು ಒಯ್ಯುವ ಕೆಲಸ ಮಾಡಿಲ್ಲ. ಈಗ ಅಂದಿನ ಸಿಎಂ ಸದಾನಂದ ಗೌಡ ಯಾವುದೇ ನಾಚಿಕೆ ಇಲ್ಲದೆ, ತಾನು ಜಾರಿಗೊಳಿಸಿದ್ದ ಯೋಜನೆಯ ಹೆಸರಲ್ಲಿ ಕಾಂಗ್ರೆಸಿಗರು ಲೂಟಿ ಹೊಡೆಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ಜನರನ್ನು ಪ್ರತಿ ಬಾರಿ ಮೋಸ ಮಾಡುತ್ತಿದ್ದಾರೆ.
Mangalore Sadananda Gowda talks about Yettinahole water project in kolar
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm