ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm