ಬ್ರೇಕಿಂಗ್ ನ್ಯೂಸ್
07-10-23 09:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.7: ತಮಿಳುನಾಡಿನಿಂದ ಲಾರಿಯಲ್ಲಿ ತಂದಿದ್ದ ಪಟಾಕಿಯನ್ನು ಇಳಿಸುತ್ತಿದ್ದಾಗ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದ್ದು, 12 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿ 25ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದ್ದು, ನಾಲ್ಕೈದು ಗಂಟೆ ಕಳೆದರೂ ರಾತ್ರಿ ವರೆಗೂ ಸ್ಥಳದಲ್ಲಿ ಉರಿಯುತ್ತಲೇ ಇತ್ತು. ಬೆಂಕಿ ನಂದಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಲ್ಲಿದ್ದ ಮೃತದೇಹಗಳು ಪೂರ್ತಿ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಪಟಾಕಿ ಮಳಿಗೆಯಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನಿತ್ತು ಎನ್ನಲಾಗಿದೆ. ದಾಸ್ತಾನು ಮಳಿಗೆ, ಪಟಾಕಿಯಿದ್ದ ಒಂದು ಲಾರಿ, ಮತ್ತೊಂದು ಸರಕು ಸಾಗಣೆಯ ಲಾರಿ, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಹೋಗಿವೆ. ಸ್ಥಳದಲ್ಲಿ ಎಷ್ಟು ಮಂದಿ ಇದ್ದರು ಅನ್ನುವ ನಿಖರ ಮಾಹಿತಿಯಿಲ್ಲ. ಹಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಜೆ ಹೊತ್ತಿಗೆ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿದ್ದರಿಂದ ಅತ್ತಿಬೆಲೆ ಪರಿಸರದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅಲ್ಲಿಂದ ತಮಿಳುನಾಡಿನ ಹೊಸೂರು ಭಾಗಕ್ಕೆ ಹೆದ್ದಾರಿಯೇ ನಾಲ್ಕು ಗಂಟೆ ಕಾಲ ಬಂದ್ ಆಗಿತ್ತು. ಎರಡು ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದರೆ, ಏನೋ ಸ್ಫೋಟ ಆಗಿದೆಯೆಂದು ಜನರು ಗಾಬರಿಯಿಂದ ನಿಂತು ನೋಡುತ್ತಿದ್ದರು. ಜನರನ್ನು ಸಂಭಾಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
A major fire broke out at a firecracker shop at Attibele in Anekal taluk while unloading the firecrackers from a goods vehicle on Saturday. As a result of the fire, 4-5 adjacent shops and some vehicles, including a truck, were burnt.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm