ಬ್ರೇಕಿಂಗ್ ನ್ಯೂಸ್
09-10-23 02:00 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.
ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.


ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.
‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.

ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ;
ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, " ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್ಎ ಬಿಗ್ ಬಾಸ್ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.
Chikkaballapura Congress MLA Pradeep Eshwar has made a surprise entry to the Bigg Boss Kannada season 10. The channel hosting the show confirmed the news by releasing the promo of the MLA’s entry.
23-04-26 10:54 am
HK News Staffer
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm