ಬ್ರೇಕಿಂಗ್ ನ್ಯೂಸ್
11-10-23 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.
ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ದದೊಂದಿಗೆ ಸಂದೇಶ ಫ್ಲಾಶ್ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?
ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಿದ ಸ್ಯಾಂಪಲ್ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.
ಪ್ರಯೋಜನ ಏನು?
ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್ ಬಳಕೆದಾರರಿಗೆ ಈ ಫ್ಲಾಶ್ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.
ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.
ಕರ್ನಾಟಕದಲ್ಲಿ ಅ.12ಕ್ಕೆ ;
ಸೆಲ್ ಬ್ರಾಡ್ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ಅ. 12ರಂದು ಕರ್ನಾಟಕದಾದ್ಯಂತ ನಡೆಸುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅ. 12 ಅಂದರೆ ನಾಡಿದ್ದು, ರಾಜ್ಯದ ಜನತೆಯ ಮೊಬೈಲ್ಗೆ ತುರ್ತು ಎಚ್ಚರಿಕೆಯ ಸಂದೇಶ ಬರಲಿದೆ. ಹೀಗಾಗಿ ಯಾರೂ ಗಾಬರಿ ಪಡಬೇಕಿಲ್ಲ. ಇದು ಸರ್ಕಾರದ ವತಿಯಿಂದಲೇ ನಡೆಯುತ್ತಿರುವ ಪರೀಕ್ಷೆಯಾಗಿದೆ.
Emergency Alert on your phone in Karnataka on October 12th, Telcom department clarifies, ‘Please ignore’. India is testing its emergency alert system by sending a test flash on several smartphones. Users heard a loud beep on their phones along with a 'emergency alert: severe' flash."This is a SAMPLE.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm