ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.
ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
02-07-25 07:55 pm
Bangalore Correspondent
Belagavi, ASP Narayan Bharamani, Dharwad: ಅಂದ...
02-07-25 02:21 pm
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಿಬಿಐ ತನಿಖೆಗೆ...
01-07-25 10:52 pm
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
02-07-25 05:31 pm
HK News Desk
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
02-07-25 08:05 pm
Mangalore Correspondent
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm