ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm