ಬ್ರೇಕಿಂಗ್ ನ್ಯೂಸ್
13-10-23 11:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.13: ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ! ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಕೇಳಿದ್ದಾರೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಪ್ರಶ್ನಿಸಿದ್ದಾರೆ.
23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈಗ ಹೇಳಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಇಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಕುಟುಕಿದ್ದಾರೆ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ' ಕೈ ' ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆ ಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ.
ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳುವ ಮೂಲಕ ಕರ್ನಾಟಕಕ್ಕೆ ಕಾಂಗ್ರೆಸ್ ಕನ್ನ ಎಂದು ಹ್ಯಾಶ್ ಟ್ಯಾಗ್ ಬಳಸಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!!
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2023
ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ.
ಆಯ್ದ ಗುತ್ತಿಗೆದಾರರಿಗೆ…
As soon as the five-state elections are announced, a blind kanchana is dancing in cotton boxes in the state. That too under the bed! Whose money was found in the contractor's house during the IT raid? Former Chief Minister HD Kumaraswamy asked.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm