ಬ್ರೇಕಿಂಗ್ ನ್ಯೂಸ್
16-10-23 04:55 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲ್ಲ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಒಂದಷ್ಟು ಶಾಸಕರು ಮತ್ತು ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ. ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು ರಾಜಕೀಯದಲ್ಲಿ ಮತ್ತೆ ಸಂಚಲನ ಎಬ್ಬಿಸಿದೆ. ಹಲವಾರು ಎಂಎಲ್ ಗಳು ನನ್ನ ಜೊತೆ ಇದ್ದಾರೆ, ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ, ಇದಕ್ಕಾಗಿ ನಾನು ಪ್ರತ್ಯೇಕವಾಗಿ ಕೋರ್ ಕಮಿಟಿ ರಚನೆ ಮಾಡುತ್ತೇನೆ ಎಂದು ಹೇಳಿದ್ದು ಜೆಡಿಎಸ್ ಒಡೆಯುವ ಸೂಚನೆ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಎನ್ ಡಿಎ ಮೈತ್ರಿಕೂಟ ಸೇರುವುದಾಗಿ ಇತ್ತೀಚೆಗೆ ಎಚ್.ಡಿ ಕುಮಾರಸ್ವಾಮಿ ಮತ್ತು ದೇವೇಗೌಡರು ಹೇಳಿದ್ದರು. ತನ್ನನ್ನು ದೂರ ಇಟ್ಟು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು. ಅಲ್ಲದೆ, ನನಗೆ ಕಾಂಗ್ರೆಸ್ ಹೈಕಮಾಂಡ್, ಎಎಪಿ, ಎನ್ ಸಿ ಪಿ ಪಕ್ಷಗಳಿಂದ ಕರೆಗಳು ಬಂದಿವೆ ಎಂದು ಇಬ್ರಾಹಿಂ ಹೇಳಿಕೊಂಡಿದ್ದರು. ಇದೀಗ ಕಾಂಗ್ರೆಸ್ ಪರವಾಗಿ ಇಬ್ರಾಹಿಂ ಹೇಳಿಕೆ ನೀಡಿದ್ದು, ತನ್ನ ಬೆಂಬಲಿಗರ ಜೊತೆಗೆ ಕಾಂಗ್ರೆಸ್ ಸೇರುತ್ತಾರೆಯೇ ಜೆಡಿಎಸ್ ಪಕ್ಷವನ್ನೇ ಒಡೆಯುತ್ತಾರೆಯೇ ಎಂಬ ಕುತೂಹಲ ಮೂಡಿಸಿದೆ.
"We will not support the BJP in the Lok Sabha elections. JD(S) state president C M Ibrahim has said that he will support the Congress. The JD(S) state president, who is unhappy with the party leadership's decision to ally with the BJP ahead of the Lok Sabha elections, made the remarks after holding a meeting with some MLAs and leaders.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm