ಬ್ರೇಕಿಂಗ್ ನ್ಯೂಸ್
18-10-23 01:03 pm HK News Desk ಕರ್ನಾಟಕ
ವಿಜಯಪುರ, ಅ.18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.
ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
In a tragic incident, four persons were killed on the spot when a speeding truck ran over them near a toll gate in Vijayapura district.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm