ಬ್ರೇಕಿಂಗ್ ನ್ಯೂಸ್
18-10-23 05:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಬುಧವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ.
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.
ಅಕ್ಟೊಬರ್ 7ರಂದು ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಗೋದಾಮಿಗೆ ಪಟಾಕಿ ಇಳಿಸುವಾಗ ದುರಂತ ಸಂಭವಿಸಿತ್ತು.
ಅದೇ ದಿನ 13 ಶವಗಳನ್ನು ಹೊರ ತೆಗೆಯಲಾಗಿತ್ತು.
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರಿಯಲ್ ತನಿಖೆ ನಡೆಸಲು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನಿಗದಿಪಡಿಸಲಾಗಿದೆ.
ಕರ್ನಾಟಕ– ತಮಿಳುನಾಡು ಗಡಿಯಲ್ಲಿರುವ ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 16 ಮಂದಿ ಮೃತಪಟ್ಟಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್ ಮೋಹನ್ ವರದಿಯೊಂದನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ವರದಿ ಪರಿಶೀಲನೆ ನಡೆಸಿರುವ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
‘ಪಟಾಕಿ ಅವಘಡಕ್ಕೆ ಕಾರಣವೇನು? ಪಟಾಕಿ ಮಳಿಗೆಗೆ ಅನುಮತಿ ಪಡೆಯಲಾಗಿತ್ತಾ? ಮಾಲೀಕರಿಂದ ಯಾವೆಲ್ಲ ದಾಖಲೆ ಪಡೆದು ಪರವಾನಗಿ ನೀಡಲಾಗಿತ್ತು ? ಪರವಾನಗಿ ನೀಡುವಲ್ಲಿ ಲೋಪವಾಗಿದೆಯಾ ? ಲೋಪವೆಸಗಿದವರು ಯಾರು ? ಅವಘಡ ಆಕಸ್ಮಿಕವೋ ಅಥವಾ ನಿರ್ಲಕ್ಷ್ಯದಿಂದ ಆಗಿದೆಯಾ ? ನಷ್ಟ ಎಷ್ಟಾಗಿದೆ ? ಎಂಬ ಬಗ್ಗೆ ಪಟಾಕಿ ದಾಸ್ತಾನು ಮಳಿಗೆಗಳ ಸ್ಫೋಟಕ ಕಾಯ್ದೆಯನ್ವಯ ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
The death toll in the Attibele firecracker blaze rose to 17 on Wednesday after another victim passed away early in the morning.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm