ಬ್ರೇಕಿಂಗ್ ನ್ಯೂಸ್
20-10-23 04:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: ''ರಾಜ್ಯ ಸರ್ಕಾರದ ಎಟಿಎಂ ಕಲೆಕ್ಷನ್ನ ಕೇಂದ್ರ ಬಿಂದು ದೆಹಲಿಯ ಹೈಕಮಾಂಡ್. ರಾಹುಲ್ ಗಾಂಧಿ ಅವರೇ ಈ ಕಲೆಕ್ಷನ್ ಸರ್ಕಾರದ ಮುಖ್ಯಸ್ಥ, ಎಲ್ಲ ವಸೂಲಿ ಹಣದ ನಿರ್ವಹಣೆ ಮಾಡೋದು ರಾಹುಲ್ ಗಾಂಧಿ ಅವರೇ'' ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಗಂಭೀರ ಆರೋಪ ಮಾಡಿದರು. ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಹೆಸರಿನ ದೊಡ್ಡ ಪೋಸ್ಟರ್ ರಿಲೀಸ್ ಮಾಡಿದರು.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹೊಸ ಪೋಸ್ಟರ್ ರಿಲೀಸ್ ಮಾಡಿದರು. ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಹೆಸರಿನ ದೊಡ್ಡ ಪೋಸ್ಟರ್ ರಿಲೀಸ್ ಮಾಡಿದರು. ರಾಹುಲ್ ಗಾಂಧಿ- ವೇಣುಗೋಪಾಲ್- ಸುರ್ಜೇವಾಲಾ- ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್- ಯತೀಂದ್ರ ಸಿದ್ದರಾಮಯ್ಯ- ಸಚಿವ ಬೈರತಿ ಸುರೇಶ್- ಗುತ್ತೆಗಾರರಾದ ಅಂಬಿಕಾಪತಿ- ಕೆಂಪಣ್ಣ ಸೇರಿದಂತೆ ಕೆಲ ಗುತ್ತಿಗೆದಾರರ ಫೊಟೋಗಳಿರುವ ಪೋಸ್ಟರ್ ಬಿಡುಗಡೆ ಮಾಡಿದರು.


ಪೋಸ್ಟರ್ ಬಿಡುಗಡೆ ಮಾಡಿದ ಮಾಜಿ ಸಿಎಂ:
ಮಾಜಿ ಸಿಎಂಡಿ.ವಿ. ಸದಾನಂದ ಗೌಡ ಮಾತನಾಡಿ, ''ಕಳೆದ ಐದು ತಿಂಗಳಿಂದ ಈ ಸರ್ಕಾರದ ಆಡಳಿತವೇನು ಅಂತ ಜನರಿಗೆ ಗೊತ್ತಾಗಿದೆ. ಇದು ಕಲೆಕ್ಷನ್ ಸರ್ಕಾರ ಅಂತ ಜನಕ್ಕೆ ಅರ್ಥ ಆಗಿದೆ. ಈ ಸರ್ಕಾರದ ಕಲೆಕ್ಷನ್ನ ಕೇಂದ್ರ ಬಿಂದು ದೆಹಲಿಯ ಹೈಕಮಾಂಡ್. ರಾಹುಲ್ ಗಾಂಧಿ ಅವರೆಡ ಈ ಕಲೆಕ್ಷನ್ ಸರ್ಕಾರದ ಮುಖ್ಯಸ್ಥ ಎಲ್ಲ ವಸೂಲಿ ಹಣದ ನಿರ್ವಹಣೆ ಮಾಡೋದು ರಾಹುಲ್ ಗಾಂಧಿ ಅವರೇ'' ಎಂದು ಗಂಭೀರ ಆರೋಪ ಮಾಡಿದರು.
ಕಮೀಷನ್ ಪಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದೆ. ನಾವು ಇವತ್ತು ಈ ಸರ್ಕಾರದ ಕಲೆಕ್ಷನ್ ವಂಶಾವಳಿ ಬಿಡುಗಡೆ ಮಾಡಿದ್ದೇವೆ. ರಾಹುಲ್ ಗಾಂಧಿಗೆ ಎರಡು ಕಡೆಯಿಂದ ಕಲೆಕ್ಷನ್ ಹೋಗುತ್ತಿದೆ. ಒಂದು ಸುರ್ಜೇವಾಲಾ ಕಡೆಯಿಂದ ಮತ್ತೊಂದು ವೇಣುಗೋಪಾಲ್ ಕಡೆಯಿಂದ ಕಲೆಕ್ಷನ್ ಹೋಗುತ್ತಿದೆ. ಸುರ್ಜೇವಾಲಾಗೆ ಸಿಎಂ ಮತ್ತು ಪುತ್ರ ಯತೀಂದ್ರ ಕಲೆಕ್ಷನ್ ಕಲೆಕ್ಟ್ ಮಾಡಿ ಕೊಡ್ತಾರೆ. ವೇಣುಗೋಪಾಲ್ಗೆ ಡಿಕೆ ಶಿವಕುಮಾರ್ ಕಲೆಕ್ಷನ್ ಸಂಗ್ರಹಿಸಿ ಕೊಡುತ್ತಿದ್ದಾರೆ. ಸಿಎಂ, ಡಿಸಿಎಂ ಗುಂಪುಗಳಿಗೆ ಅವರರವರ ಬಣದ ಗುತ್ತಿಗೆದಾರರು ಕಮೀಷನ್ ಸಂಗ್ರಹಿಸಿ ಕೊಡುತ್ತಿದ್ದಾರೆ. ಕೆಂಪಣ್ಣ ಸಿದ್ದರಾಮಯ್ಯ ಗುಂಪಿನಲ್ಲಿದ್ದರೆ, ಅಂಬಿಕಾಪತಿ ಡಿಕೆ ಶಿವಕುಮಾರ್ ಗುಂಪಿನಲ್ಲಿದ್ದು, ಹಣ ಸಂಗ್ರಹ ಮಾಡಿಕೊಡುತ್ತಿದ್ದಾರೆ'' ಎಂದು ಆರೋಪಿಸಿದರು.
"The centre of the state government's ATM collection is the Delhi high command. Rahul Gandhi is the head of this collection government and it is Rahul Gandhi who manages all the collections," he said. Sadananda Gowda made serious allegations. The ATM released a big poster titled 'Collection Genealogy' of the government.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm