ಬ್ರೇಕಿಂಗ್ ನ್ಯೂಸ್
21-10-23 04:10 pm Bangalore Correspondent ಕರ್ನಾಟಕ
ಬೆಂಗಳೂರು, ಅ.21: ಪದ್ಮಭೂಷಣ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ಪರ್ವ ಕಾದಂಬರಿ ಬಾಲಿವುಡ್ ಚಿತ್ರವಾಗಿ ತೆರೆಮೇಲೆ ಬರಲು ತಯಾರಾಗಿದೆ. ಕಾಶ್ಮೀರ್ ಫೈಲ್ಸ್, ವ್ಯಾಕ್ಸಿನ್ ವಾರ್ ಚಿತ್ರದ ಮೂಲಕ ದೇಶ- ವಿದೇಶದಲ್ಲಿ ಸಂಚಲನ ಸೃಷ್ಟಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರ್ವ ಚಿತ್ರದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾದಂಬರಿಕಾರ, ಎಸ್.ಎಲ್ ಭೈರಪ್ಪ, ಪ್ರಕಾಶ್ ಬೆಳವಾಡಿ, ನಿರ್ಮಾಪಕಿ ಪಲ್ಲವಿ ಜೋಶಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲೇ ಪರ್ವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಮಹಾಭಾರತದ ಕಥಾನಕ ಇರುವ ಪರ್ವ ಕನ್ನಡದ ಮೇರು ಕೃತಿಗಳಲ್ಲಿ ಒಂದು. ವಿಶೇಷ ಅಂದರೆ ಮೂರು ಭಾಗಗಳಲ್ಲಾಗಿ ಪರ್ವ ತೆರೆಗೆ ಬರಲಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಸಂತಸ ವ್ಯಕ್ತಪಡಿಸಿದ್ದು, ಮಹಾಭಾರತದ ದೃಶ್ಯಕಾವ್ಯವನ್ನು ಪ್ರಮುಖ ಪಾತ್ರಗಳ ಮೂಲಕ ನಿರೂಪಿಸಲಾಗಿದೆ. ಮಾಡರ್ನ್ ಕ್ಲಾಸಿಕ್ ಕೃತಿಯೆಂದು ಪ್ರಶಂಸೆ ಪಡೆದಿರುವ ಪರ್ವವನ್ನು ತೆರೆ ಮೇಲೆ ತರುವ ಮಹತ್ತರ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ಚಿತ್ರ ನೋಡಿ ಮೆಚ್ಚಿಕೊಂಡಿದ್ದ ಎಸ್.ಎಲ್ ಬೈರಪ್ಪ, ಆಪ್ತರಾಗಿರುವ ಪ್ರಕಾಶ್ ಬೆಳವಾಡಿ ಜೊತೆ ಚಿತ್ರದ ಕುರಿತು ಮಾತನಾಡಿದ್ದರು. ಇದೇ ವೇಳೆ ಪ್ರಕಾಶ್ ಬೆಳವಾಡಿ ದೂರವಾಣಿ ಕರೆ ಮೂಲಕ ವಿವೇಕ್ ಅಗ್ನಿಹೋತ್ರಿ ಜೊತೆ ಮಾತನಾಡಿದ್ದರು. ಎಸ್ಎಲ್ ಭೈರಪ್ಪ ಜೊತೆ ಮಾತನಾಡುವಂತೆ ಅಗ್ನಿಹೋತ್ರಿಗೆ ಸೂಚಿಸಿದ್ದರು. ಒಂದು ವರ್ಷ ಹಿಂದೆ ನಡೆದಿರುವ ಈ ಘಟನೆಯನ್ನು ವೇದಿಕೆಯಲ್ಲಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಭೈರಪ್ಪ ಜೊತೆ ಚರ್ಚಿಸಿ ಪರ್ವ ಕೃತಿಯನ್ನು ತೆರೆ ಮೇಲೆ ತರುವ ಧೈರ್ಯ ಮಾಡಿದ್ದಾಗಿ ತಿಳಿಸಿದ್ದಾರೆ.
BIG ANNOUNCEMENT:
— Vivek Ranjan Agnihotri (@vivekagnihotri) October 21, 2023
Is Mahabharat HISTORY or MYTHOLOGY?
We, at @i_ambuddha are grateful to the almighty to be presenting Padma Bhushan Dr. SL Bhyrappa’s ‘modern classic’:
PARVA - AN EPIC TALE OF DHARMA.
There is a reason why PARVA is called ‘Masterpiece of masterpieces’.
1/2 pic.twitter.com/BiRyClhT5c
Ahead of Dussehra, Vivek Ranjan Agnihotri announced his next film 'Parva.' The movie will be based on a Book named Parva, written by S. L. Bhyrappa. It will be 3 parts big franchise. The director who made the announcement in Bangalore introduced the film team to the audience as well.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm