ಬ್ರೇಕಿಂಗ್ ನ್ಯೂಸ್
21-10-23 04:10 pm Bangalore Correspondent ಕರ್ನಾಟಕ
ಬೆಂಗಳೂರು, ಅ.21: ಪದ್ಮಭೂಷಣ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ಪರ್ವ ಕಾದಂಬರಿ ಬಾಲಿವುಡ್ ಚಿತ್ರವಾಗಿ ತೆರೆಮೇಲೆ ಬರಲು ತಯಾರಾಗಿದೆ. ಕಾಶ್ಮೀರ್ ಫೈಲ್ಸ್, ವ್ಯಾಕ್ಸಿನ್ ವಾರ್ ಚಿತ್ರದ ಮೂಲಕ ದೇಶ- ವಿದೇಶದಲ್ಲಿ ಸಂಚಲನ ಸೃಷ್ಟಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರ್ವ ಚಿತ್ರದ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾದಂಬರಿಕಾರ, ಎಸ್.ಎಲ್ ಭೈರಪ್ಪ, ಪ್ರಕಾಶ್ ಬೆಳವಾಡಿ, ನಿರ್ಮಾಪಕಿ ಪಲ್ಲವಿ ಜೋಶಿ ಸೇರಿದಂತೆ ಪ್ರಮುಖರ ಸಮ್ಮುಖದಲ್ಲೇ ಪರ್ವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಮಹಾಭಾರತದ ಕಥಾನಕ ಇರುವ ಪರ್ವ ಕನ್ನಡದ ಮೇರು ಕೃತಿಗಳಲ್ಲಿ ಒಂದು. ವಿಶೇಷ ಅಂದರೆ ಮೂರು ಭಾಗಗಳಲ್ಲಾಗಿ ಪರ್ವ ತೆರೆಗೆ ಬರಲಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಸಂತಸ ವ್ಯಕ್ತಪಡಿಸಿದ್ದು, ಮಹಾಭಾರತದ ದೃಶ್ಯಕಾವ್ಯವನ್ನು ಪ್ರಮುಖ ಪಾತ್ರಗಳ ಮೂಲಕ ನಿರೂಪಿಸಲಾಗಿದೆ. ಮಾಡರ್ನ್ ಕ್ಲಾಸಿಕ್ ಕೃತಿಯೆಂದು ಪ್ರಶಂಸೆ ಪಡೆದಿರುವ ಪರ್ವವನ್ನು ತೆರೆ ಮೇಲೆ ತರುವ ಮಹತ್ತರ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ಚಿತ್ರ ನೋಡಿ ಮೆಚ್ಚಿಕೊಂಡಿದ್ದ ಎಸ್.ಎಲ್ ಬೈರಪ್ಪ, ಆಪ್ತರಾಗಿರುವ ಪ್ರಕಾಶ್ ಬೆಳವಾಡಿ ಜೊತೆ ಚಿತ್ರದ ಕುರಿತು ಮಾತನಾಡಿದ್ದರು. ಇದೇ ವೇಳೆ ಪ್ರಕಾಶ್ ಬೆಳವಾಡಿ ದೂರವಾಣಿ ಕರೆ ಮೂಲಕ ವಿವೇಕ್ ಅಗ್ನಿಹೋತ್ರಿ ಜೊತೆ ಮಾತನಾಡಿದ್ದರು. ಎಸ್ಎಲ್ ಭೈರಪ್ಪ ಜೊತೆ ಮಾತನಾಡುವಂತೆ ಅಗ್ನಿಹೋತ್ರಿಗೆ ಸೂಚಿಸಿದ್ದರು. ಒಂದು ವರ್ಷ ಹಿಂದೆ ನಡೆದಿರುವ ಈ ಘಟನೆಯನ್ನು ವೇದಿಕೆಯಲ್ಲಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಭೈರಪ್ಪ ಜೊತೆ ಚರ್ಚಿಸಿ ಪರ್ವ ಕೃತಿಯನ್ನು ತೆರೆ ಮೇಲೆ ತರುವ ಧೈರ್ಯ ಮಾಡಿದ್ದಾಗಿ ತಿಳಿಸಿದ್ದಾರೆ.
BIG ANNOUNCEMENT:
— Vivek Ranjan Agnihotri (@vivekagnihotri) October 21, 2023
Is Mahabharat HISTORY or MYTHOLOGY?
We, at @i_ambuddha are grateful to the almighty to be presenting Padma Bhushan Dr. SL Bhyrappa’s ‘modern classic’:
PARVA - AN EPIC TALE OF DHARMA.
There is a reason why PARVA is called ‘Masterpiece of masterpieces’.
1/2 pic.twitter.com/BiRyClhT5c
Ahead of Dussehra, Vivek Ranjan Agnihotri announced his next film 'Parva.' The movie will be based on a Book named Parva, written by S. L. Bhyrappa. It will be 3 parts big franchise. The director who made the announcement in Bangalore introduced the film team to the audience as well.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm