ಬ್ರೇಕಿಂಗ್ ನ್ಯೂಸ್
06-08-20 09:36 am Headline Karnataka News Network ಕರ್ನಾಟಕ
ಬೆಂಗಳೂರು, ಆ. 06: ಬಹುದೊಡ್ಡ ಸವಾಲನ್ನು ಎಳೆದುಕೊಂಡು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾಡಿ ಮುಗಿಸಿದ್ದಾರೆ. ಕೊರೊನಾ ವೈರಸ್ ಹರಡುವ ಭಯದಲ್ಲಿ ಸುರಕ್ಷಿತವಾಗಿ ಪರೀಕ್ಷೆಗಳು ಮುಗಿದಿದ್ದವು. ಜೊತೆಗೆ ಪರೀಕ್ಷಾ ಮೌಲ್ಯಮಾಪನ ಕೂಡ ಶುರುವಾಗಿತ್ತು. ಇದೀಗ ನಾಳೆ ಎಸ್ಎಸ್ಎಲ್ ಪರೀಕ್ಷಾ ಫಲಿತಾಂಶ ಬರಲಿದೆ ಎಂಬ ಸುದ್ದಿ ಬಂದಿದೆ.
ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಾರಿ ಕೊರೊನಾ ವೈರಸ್ನಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಇನ್ನೇನು 10ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಬೇಕು ಎಂಬ ಸಮಯದಲ್ಲಿ ಕೋವಿಡ್-19 ದಿಢೀರ್ ಹಾವಳಿ ಶುರುಮಾಡಿತ್ತು. ಮುಂದುವರೆದ ಅಮೆರಿಕ, ಇಟಲಿ, ಚೀನಾ ಹಾಗೂ ಇಂಗ್ಲಂಡ್ ನಂತಹ ದೇಶಗಳೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸಿ ಹೋಗಿದ್ದವು. ಆತಂಕದ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮುಗಿಸಿದ್ದಾರೆ.
ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾಥಿಗಳು ಪರೀಕ್ಷೆಯನ್ನು ಬರೆದಿದ್ದರು. ಪರೀಕ್ಷಾ ಸಂದರ್ಭದಲ್ಲಿ 33 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಅವರಿಗೆ ಪರೀಕ್ಷೆಯನ್ನು ನಿರಾಕರಿಸಿ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶವನ್ನ ಕಲ್ಪಿಸಲಾಗುತ್ತಿದೆ.

ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ:
ಇದೀಗ ನಾಳೆ (ಆ. 07) ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಬಂದಿದೆ. ಅದಕ್ಕೆ ಸ್ಪಷ್ಟನೆ ಕೊಟ್ಟಿರುವ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಫಲಿತಾಂಶ ಪ್ರಕಟ ಮಾಡಲು ಇನ್ನೂ ದಿನಾಂಕ ನಿಶ್ಚಯವಾಗಿಲ್ಲ. ಅಧಿಕೃತವಾಗಿ ಶಿಕ್ಷಣ ಇಲಾಖೆ ಸಮಗ್ರ ಮಾಹಿತಿಯನ್ನು ಕೊಡಲಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟದ ಸುದ್ದಿ ಸುಳ್ಳು ಎಂದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm