ಬ್ರೇಕಿಂಗ್ ನ್ಯೂಸ್
24-10-23 11:53 am HK News Desk ಕರ್ನಾಟಕ
ಚಿಕ್ಕಮಗಳೂರು, ಅ 24: ಹುಲಿ ಉಗುರು ಧರಿಸಿದ ಆರೋಪದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ.
ಸತೀಶ್, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ.
ಬಂಧಿತ ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರಾಗಿದ್ದು, ಬಂಧಿತರಿಂದ ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಲೆ ಮರೆಸಿಕೊಂಡಿರುವ ಇಬ್ಬರ ಬಂಧನಕ್ಕೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ವರದಿಯಾಗಿದೆ.
ಬಂಧನ ಪ್ರಕರಣದಲ್ಲಿ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಪ್ರಕರಣದಲ್ಲಿ ಸಂತೋಷ್ ಆಪ್ತ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ತನಿಖೆಯ ಸಂದರ್ಭದಲ್ಲಿ ಸಂತೋಷ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತನಿಖೆ ಮುಂದುವರಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ಹೊಸೂರು ಮೂಲದ ವರ್ತೂರು ಬಳಿ ಇರುವ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.
Bigg Boss Contestant Varthur Santhosh arrest, two arrested from chikmagaluru, notice issued to gold shop owner.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm