ಬ್ರೇಕಿಂಗ್ ನ್ಯೂಸ್
24-10-23 11:53 am HK News Desk ಕರ್ನಾಟಕ
ಚಿಕ್ಕಮಗಳೂರು, ಅ 24: ಹುಲಿ ಉಗುರು ಧರಿಸಿದ ಆರೋಪದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ.
ಸತೀಶ್, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ.
ಬಂಧಿತ ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರಾಗಿದ್ದು, ಬಂಧಿತರಿಂದ ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಲೆ ಮರೆಸಿಕೊಂಡಿರುವ ಇಬ್ಬರ ಬಂಧನಕ್ಕೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ವರದಿಯಾಗಿದೆ.
ಬಂಧನ ಪ್ರಕರಣದಲ್ಲಿ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಪ್ರಕರಣದಲ್ಲಿ ಸಂತೋಷ್ ಆಪ್ತ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ತನಿಖೆಯ ಸಂದರ್ಭದಲ್ಲಿ ಸಂತೋಷ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತನಿಖೆ ಮುಂದುವರಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ಹೊಸೂರು ಮೂಲದ ವರ್ತೂರು ಬಳಿ ಇರುವ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.
Bigg Boss Contestant Varthur Santhosh arrest, two arrested from chikmagaluru, notice issued to gold shop owner.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm