ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm