ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm