ಬ್ರೇಕಿಂಗ್ ನ್ಯೂಸ್
28-10-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನ ಮೂವರು ಶಾಸಕರಿಗೆ 50 ಕೋಟಿ ರೂಪಾಯಿ ಮತ್ತು ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂಬ ವಿಚಾರದ ಕುರಿತು ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಕೆಶಿ, ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಿದ್ದಾರೆ. ಬಹಳ ಪ್ರಯತ್ನ ಮಾಡ್ತಿದ್ದಾರೆ. ಆದರೆ, ಯಾವುದೂ ಫಲ ಕೊಡಲ್ಲ ಎಂದಿದ್ದಾರೆ.
ಪಕ್ಷದ ಆಂತರಿಕ ವಿಚಾರಗಳ ಕುರಿತು ಯಾವುದೇ ಶಾಸಕರು ಹೇಳಿಕೆ ನೀಡಬಾರದು ಎಂದು ಈ ಹಿಂದೆ ಡಿಕೆಶಿ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಶಾಸಕರು ಅಲ್ಲಲ್ಲಿ ವಿವಿಧ ಹೇಳಿಕೆಗಳನ್ನು ಕೊಡ್ತಿದ್ದಾರೆ. ಈ ಹಿನ್ನೆಲೆ ಡಿಕೆಶಿ ಇಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
‘ನಾನು ನಮ್ಮ ಪಕ್ಷದ ಶಾಸಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ, ಯಾರೂ ಕೂಡ ಪಕ್ಷದ ವಿಚಾರಗಳ ಕುರಿತು ಹೇಳಿಕೆ ಕೊಡಬೇಡಿ. ಇದನ್ನು ಮೀರಿ ಹೇಳಿಕೆ ಕೊಟ್ಟರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆಪರೇಷನ್ ಹಸ್ತದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ತೀವ್ರಗೊಂಡಿದೆ. ಆಪರೇಷನ್ ಕಮಲದ ಹಿಂದಿನ ಗ್ಯಾಂಗ್ ಮತ್ತೆ ಸಕ್ರಿಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ ಮಾಡಿದ್ದರು. ನಿಮ್ಮನ್ನು ಅಮಿತ್ ಷಾ ಬಳಿ ಭೇಟಿ ಮಾಡಿಸ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ ಎಂದೆಲ್ಲಾ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಎನ್. ಆರ್ ಸಂತೋಷ್ 10 ದಿನದ ಹಿಂದೆ ನನ್ನನ್ನು ಭೇಟಿ ಮಾಡಿದ್ದರು. ನಮ್ಮ ಶಾಸಕರನ್ನ ಗೋಲ್ಡ್ ಪಿಂಚ್ ಹೊಟೇಲ್ ನಲ್ಲಿ ಭೇಟಿ ಮಾಡಿದ್ರು. ಮತ್ತೊಬ್ಬರು ಮಾಜಿ ಎಂಎಲ್ ಸಿ, ಇನ್ನೊಬ್ಬರು ಬೆಳಗಾವಿ ನಾಯಕರು ಇದ್ದಾರೆ. ಸಮಯ ಬರಲಿ ಎಲ್ಲವನ್ನೂ ಬಿಚ್ಚಿಡ್ತೇವೆ ಎಂದಿದ್ದರು.
Conspiracy to topple Karnataka Congress govt won’t work by BJP says DyCM Shivakumar. Karnataka Congress MLA Ganiga Ravi on Friday alleged that attempts are on to destabilise the Congress government in the state and his colleagues are being offered Rs 50 crore and a minister portfolio.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm