ಬ್ರೇಕಿಂಗ್ ನ್ಯೂಸ್
28-10-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನ ಮೂವರು ಶಾಸಕರಿಗೆ 50 ಕೋಟಿ ರೂಪಾಯಿ ಮತ್ತು ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂಬ ವಿಚಾರದ ಕುರಿತು ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಕೆಶಿ, ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಿದ್ದಾರೆ. ಬಹಳ ಪ್ರಯತ್ನ ಮಾಡ್ತಿದ್ದಾರೆ. ಆದರೆ, ಯಾವುದೂ ಫಲ ಕೊಡಲ್ಲ ಎಂದಿದ್ದಾರೆ.
ಪಕ್ಷದ ಆಂತರಿಕ ವಿಚಾರಗಳ ಕುರಿತು ಯಾವುದೇ ಶಾಸಕರು ಹೇಳಿಕೆ ನೀಡಬಾರದು ಎಂದು ಈ ಹಿಂದೆ ಡಿಕೆಶಿ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಶಾಸಕರು ಅಲ್ಲಲ್ಲಿ ವಿವಿಧ ಹೇಳಿಕೆಗಳನ್ನು ಕೊಡ್ತಿದ್ದಾರೆ. ಈ ಹಿನ್ನೆಲೆ ಡಿಕೆಶಿ ಇಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
‘ನಾನು ನಮ್ಮ ಪಕ್ಷದ ಶಾಸಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ, ಯಾರೂ ಕೂಡ ಪಕ್ಷದ ವಿಚಾರಗಳ ಕುರಿತು ಹೇಳಿಕೆ ಕೊಡಬೇಡಿ. ಇದನ್ನು ಮೀರಿ ಹೇಳಿಕೆ ಕೊಟ್ಟರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆಪರೇಷನ್ ಹಸ್ತದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ತೀವ್ರಗೊಂಡಿದೆ. ಆಪರೇಷನ್ ಕಮಲದ ಹಿಂದಿನ ಗ್ಯಾಂಗ್ ಮತ್ತೆ ಸಕ್ರಿಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ ಮಾಡಿದ್ದರು. ನಿಮ್ಮನ್ನು ಅಮಿತ್ ಷಾ ಬಳಿ ಭೇಟಿ ಮಾಡಿಸ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ ಎಂದೆಲ್ಲಾ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಎನ್. ಆರ್ ಸಂತೋಷ್ 10 ದಿನದ ಹಿಂದೆ ನನ್ನನ್ನು ಭೇಟಿ ಮಾಡಿದ್ದರು. ನಮ್ಮ ಶಾಸಕರನ್ನ ಗೋಲ್ಡ್ ಪಿಂಚ್ ಹೊಟೇಲ್ ನಲ್ಲಿ ಭೇಟಿ ಮಾಡಿದ್ರು. ಮತ್ತೊಬ್ಬರು ಮಾಜಿ ಎಂಎಲ್ ಸಿ, ಇನ್ನೊಬ್ಬರು ಬೆಳಗಾವಿ ನಾಯಕರು ಇದ್ದಾರೆ. ಸಮಯ ಬರಲಿ ಎಲ್ಲವನ್ನೂ ಬಿಚ್ಚಿಡ್ತೇವೆ ಎಂದಿದ್ದರು.
Conspiracy to topple Karnataka Congress govt won’t work by BJP says DyCM Shivakumar. Karnataka Congress MLA Ganiga Ravi on Friday alleged that attempts are on to destabilise the Congress government in the state and his colleagues are being offered Rs 50 crore and a minister portfolio.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm