ಬ್ರೇಕಿಂಗ್ ನ್ಯೂಸ್
30-10-23 10:12 pm Bangalore Correspondent ಕರ್ನಾಟಕ
ಬೆಂಗಳೂರು, ಅ.30: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮತ್ತೆ ಶಾಕ್ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಕಾಣಿಸಿಕೊಂಡಿರುವ ನಡುವಲ್ಲೇ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಮತ್ತೆ 2600 ಕ್ಯೂಸೆಕ್ ನೀರು ಬಿಡಲು ಶಿಫಾರಸು ಮಾಡಿದೆ. ಸೋಮವಾರ ದಿಲ್ಲಿಯನ್ನು ಕೇಂದ್ರವಾಗಿಟ್ಟು ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಗಿದೆ.
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿ ಕಾವೇರಿ ನೀರು ನಿಯಂತ್ರಣ ಸಮಿತಿ ನಡೆಸಿದ 89ನೇ ಸಭೆ ಇದಾಗಿತ್ತು. ಇತ್ತೀಚೆಗೆ ನಡೆದ ಐದು ಸಭೆಗಳಲ್ಲಿ ಸಮಿತಿಯು ಕರ್ನಾಟಕಕ್ಕೆ 15 ದಿನಗಳ ಕಾಲ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸುತ್ತ ಬಂದಿತ್ತು. ತಮಿಳುನಾಡು ಪ್ರತಿ ಬಾರಿಯೂ ದಿನಕ್ಕೆ 12500 ಕ್ಯೂಸೆಕ್ ನೀರಿಗೆ ಬೇಡಿಕೆ ಇಡುವುದು, ಕರ್ನಾಟಕ ಸರ್ಕಾರ ಬರದ ಕಾರಣ ನೀಡಿ ನಿರಾಕರಿಸುವುದು, ಬಳಿಕ ಸಿಡಬ್ಲ್ಯೂಆರ್ಸಿ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸೂಚಿಸುವುದು ನಡೆದಿತ್ತು.
ಕಾವೇರಿ ನೀರು ನಿಯಂತ್ರಣ ಸಮಿತಿಯು ಆಗಸ್ಟ್ 26ರಂದು ನೀಡಿದ ಆದೇಶದಲ್ಲಿ ಆಗಸ್ಟ್ 29ರಿಂದ 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಬಿಡಲು ಸೂಚಿಸಿತ್ತು. ಬಳಿಕ ಸೆ.12ರಂದು ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಿತ್ತು. ಸೆಪ್ಟೆಂಬರ್ 26ರಂದು ಇದೇ ಆದೇಶವನ್ನು ರಿಪೀಟ್ ಮಾಡಿತ್ತು. ಅಕ್ಟೋಬರ್ 12ರಂದು ನೀಡಿದ ಆದೇಶದಲ್ಲಿ ಈ ಪ್ರಮಾಣವನ್ನು 3000ಕ್ಕೆ ಇಳಿಸಿತ್ತು. ಅ.30ರ ಸೋಮವಾರ ನಡೆದ ಐದನೇ ಮೀಟಿಂಗ್ನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು 2600 ಕ್ಯೂಸೆಕ್ಗೆ ಇಳಿಸಿದೆ. ಕರ್ನಾಟಕದಲ್ಲಿ ಕಾವೇರಿ ನೀರಿನ ವಿಚಾರದಲ್ಲಿ ನಿರಂತರ ಪ್ರತಿಭಟನೆ ನಡೆದಿದ್ದು ರೈತರು ಬೀದಿಗೆ ಇಳಿದಿದ್ದಾರೆ. ಈಗ ಮತ್ತೆ ರೈತರ ಮೇಲೆ ಬರೆ ಎಳೆಯುವ ಆದೇಶವನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿದೆ.
The Cauvery Water Regulation Committee (CWR) Tuesday asked the Karnataka government to release 2,600 cusecs of water to Tamil Nadu at Biligundlu. The CWRC in its 89th meeting passed the order after considering the submissions from both the Karnataka and Tamil Nadu governments, the report said.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm