ಬ್ರೇಕಿಂಗ್ ನ್ಯೂಸ್
01-11-23 12:22 pm Bangalore Correspondent ಕರ್ನಾಟಕ
ಬೆಂಗಳೂರು, ನ.01: ನಾವೆಲ್ಲರೂ ಕನ್ನಡ ಭಾಷೆಯಲ್ಲೇ ವ್ಯವಹರಿಸುತ್ತೇವೆ. ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಎಂದು ಪ್ರತಿಜ್ಞೆ ಮಾಡಬೇಕಾದ ಪರಿಸ್ಥಿತಿ ಇದೆ. ಭಾಷೆ, ನೆಲ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗದ್ದು ಅಗತ್ಯ. ಇದು ನನ್ನ ತಾಯಿ ನಾಡು, ಕನ್ನಡ ನನ್ನ ತಾಯಿ ಭಾಷೆ ಈ ನೆಲದಲ್ಲಿ ಹುಟ್ಟಿದ್ದೇನೆ, ಅದರ ಋಣ ತೀರಿಸಬೇಕಾದರೆ ಕನ್ನಡ ನೆಲ ಭಾಷೆ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕಾಗ ಕೆಲಸ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಂಠೀರವ ಮೈದಾನದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತಮಿಳು, ಮಲಯಾಳಂ, ತೆಲುವು ಭಾಷೆ ಮಾತನಾಡಿ ಬದುಕು ನಡೆಸಬಹುದಾದ ಪರಿಸ್ಥಿತಿ ಇದೆ. ಆದರೆ ಬೇರೆ ರಾಜ್ಯಗಳಲ್ಲಿ ಈ ಪರಿಸ್ಥಿತಿ ಇಲ್ಲ ಎಂದರು.
ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಘೋಷಣೆ ;
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರನ್ನು ಕೊಡಲಾಗುವುದು ಎಂದು ಸಿಎಂ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು. ಶಿಕ್ಷಣ ಇಲಾಖೆಯ ಮನವಿಯ ಮೇರೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘೋಷಣೆಯನ್ನು ಸಿಎಂ ಮಾಡಿದರು.
ಸರ್ಕಾರದ ಆಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಕೇಂದ್ರದ ಜೊತೆಗೆ ವ್ಯವಹರಿಸಬೇಕಾದ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆ ಬಳಸಬೇಕು. ಆಡಳಿತ ಪರಿಣಾಮಕಾರಿಯಾಗಿ ಜನರನ್ನು ತಲುಪಬೇಕಾದರೆ ಕನ್ನಡ ಭಾಷೆಯನ್ನೇ ಬಳಸಬೇಕು. ಅಧಿಕಾರಿಗಳು ಮತ್ತು ರಾಜಕಾರಣಿಗಳು ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಹೇಳಿದರು.
ಮೈಸೂರು ರಾಜ್ಯಕ್ಕೆ ದೇವರಾಜ್ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಇವತ್ತಿಗೆ 50 ವರ್ಷ ತುಂಬಿದೆ. ಇದರ ಸವಿ ನೆನಪಿಗಾಗಿ ರಾಜ್ಯದಲ್ಲಿ 1 ವರ್ಷ ಕರ್ನಾಟಕ ಸಂಭ್ರಮ 50 ಎಂಬ ಹೆಸರಿನ ಮೂಲಕ ನಮ್ಮ ಸಾಹಿತ್ಯ, ಜಾನಪತ, ಕಲೆ, ಸಂಸ್ಕತಿ, ಸಂಪ್ರದಾಯವನ್ನು ಇಡೀ ವರ್ಷ ರಾಜ್ಯದ ಉದ್ದಗಲಕ್ಕೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದರು. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷಾ ವಾಕ್ಯದೊಂದಿಗೆ ರಾಜ್ಯಾದ್ಯಂತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಹಿಂದಿನ ಸರ್ಕಾರ ಮಾಡದೆ ಇದ್ದ ಕಾರಣಕ್ಕಾಗಿ ಆಯವ್ಯಯ ಭಾಷಣದಲ್ಲಿ ಕರ್ನಾಟಕ ಸಂಭ್ರಮ ವರ್ಷ ಆಚರಣೆಯ ಘೋಷಣೆ ಮಾಡಿದ್ದೆ. ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
Speaking at the Karnataka Rajyotsava Award CM Siddaramaiah announced free power and water supply to all government schools in the state. The announcement was made during the 68th Kannada Rajyotsava celebrations held on Wednesday.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm