ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm