ಬ್ರೇಕಿಂಗ್ ನ್ಯೂಸ್
02-11-23 08:35 pm HK News Desk ಕರ್ನಾಟಕ
ಹೊಸಪೇಟೆ, ನ.2: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಇತ್ಯಾದಿ ವಿಚಾರದಲ್ಲಿ ಯಾರು ಕೂಡ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ನಾನೇ ಮುಂದುವರೆಯುವೆ’ ಎಂದು ಹೇಳಿದ್ದಾರೆ. ‘ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.
ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು
ಬಿಜೆಪಿಗರು ಭ್ರಮನಿರಸನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
Karnataka Chief Minister Siddaramaiah on Thursday asserted that he would hold the office for a full five years. The clarification came in the wake of speculation within a section of the ruling Congress about a change in leadership after two-and-half years of this government’s tenure.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm