ಬ್ರೇಕಿಂಗ್ ನ್ಯೂಸ್
02-11-23 08:35 pm HK News Desk ಕರ್ನಾಟಕ
ಹೊಸಪೇಟೆ, ನ.2: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಇತ್ಯಾದಿ ವಿಚಾರದಲ್ಲಿ ಯಾರು ಕೂಡ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ನಾನೇ ಮುಂದುವರೆಯುವೆ’ ಎಂದು ಹೇಳಿದ್ದಾರೆ. ‘ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.
ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು
ಬಿಜೆಪಿಗರು ಭ್ರಮನಿರಸನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
Karnataka Chief Minister Siddaramaiah on Thursday asserted that he would hold the office for a full five years. The clarification came in the wake of speculation within a section of the ruling Congress about a change in leadership after two-and-half years of this government’s tenure.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm