ಬ್ರೇಕಿಂಗ್ ನ್ಯೂಸ್
02-11-23 08:35 pm HK News Desk ಕರ್ನಾಟಕ
ಹೊಸಪೇಟೆ, ನ.2: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಇತ್ಯಾದಿ ವಿಚಾರದಲ್ಲಿ ಯಾರು ಕೂಡ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ನಾನೇ ಮುಂದುವರೆಯುವೆ’ ಎಂದು ಹೇಳಿದ್ದಾರೆ. ‘ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.
ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು
ಬಿಜೆಪಿಗರು ಭ್ರಮನಿರಸನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
Karnataka Chief Minister Siddaramaiah on Thursday asserted that he would hold the office for a full five years. The clarification came in the wake of speculation within a section of the ruling Congress about a change in leadership after two-and-half years of this government’s tenure.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm