ಬ್ರೇಕಿಂಗ್ ನ್ಯೂಸ್
02-11-23 11:00 pm HK News Desk ಕರ್ನಾಟಕ
ವಿಜಯನಗರ, ನ.2: ಹಂಪಿಗೆ ಹೋದಲ್ಲಿ ಅಧಿಕಾರ ಹೋಗುತ್ತೆ ಎನ್ನುವ ಅಪವಾದ, ಮೂಢನಂಬಿಕೆಯನ್ನು ಮೆಟ್ಟಿ ನಿಲ್ಲುವ ಪ್ರಯತ್ನವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೊಸಪೇಟೆಯ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿಯೇ ಜ್ಯೋತಿ ರಥಯಾತ್ರೆ ಚಾಲನೆ ನೀಡಿದ್ದಾರೆ.
ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ರುದ್ರಾಕ್ಷಿ ಮಾಲೆಯನ್ನು ಧರಿಸಿ ಗಂಗಾ ಜಲಾಭಿಷೇಕ ನೆರವೇರಿಸಿದ್ದಾರೆ. ಭುವನೇಶ್ವರಿ ದೇಗುಲದಲ್ಲಿ ಪಂಚಾಮೃತ ಅಭಿಷೇಕ ಪೂಜೆ ಸಲ್ಲಿಸಿ, ರಥಬೀದಿಯಲ್ಲಿ ಜನಪದ ಕಲಾತಂಡಗಳೊಂದಿಗೆ ಕಾಲ್ನಡಿಗೆಯಲ್ಲೇ ಬಸವಣ್ಣ ಮಂಟಪದ ವರೆಗೆ ಸಾಗಿದ್ದಾರೆ. ಇದೇ ವೇಳೆ, ಹೆಲಿಕಾಪ್ಟರ್ ನಲ್ಲಿ ಪುಷ್ಪವೃಷ್ಟಿ ನಡೆಸಲಾಗಿದ್ದು ಬಸವಣ್ಣ ಮಂಟಪದಲ್ಲಿ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ್ದಾರೆ.
ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಂಪಿಯಿಂದಲೇ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ್ದೇವೆ. 1973ರ ನವೆಂಬರ್ 2ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಹಂಪಿಯಿಂದಲೇ ಕರ್ನಾಟಕ ನಾಮಕರಣದ ಘೋಷಣೆ ಮಾಡಿದ್ದರು. ಅಲ್ಲದೆ, ಜ್ಯೋತಿ ರಥಯಾತ್ರೆಯನ್ನೂ ಚಾಲನೆ ನೀಡಿದದ್ರು. ಅರಸು ಕೂಡ ಮೈಸೂರು ಜಿಲ್ಲೆಯವರು. ನಾನೂ ಮೈಸೂರು ಜಿಲ್ಲೆಯವನು. ಒಂದು ವರ್ಷ ಸಂಭ್ರಮಾಚರಣೆ ನಡೆಯುತ್ತದೆ. ಅಂದು ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು. ಇಂದು ನನಗೆ ಅವಕಾಶ ಸಿಕ್ಕಿರುವುದು ಕಾಕತಾಳೀಯವಾಗಿದೆ. ನನಗೆ ಮೂಢನಂಬಿಕೆ, ಮೌಢ್ಯಗಳಲ್ಲಿ ನಂಬಿಕೆ ಇಲ್ಲ. ಆಗಂತೇಳಿ ದೇವರನ್ನು ನಂಬದೆ ಇರಲ್ಲ, ದೇವರನ್ನು ನಂಬುತ್ತೇನೆ. ಸಮಾಜಕ್ಕೆ ಒಳ್ಳೆಯದಾಗುವುದನ್ನು ನಂಬುತ್ತೇನೆ. ಕೆಟ್ಟದಾಗೋದನ್ನು ನಂಬೋದಿಲ್ಲ ಎಂದರು.
ಹಂಪಿ ವಿರೂಪಾಕ್ಷನಿಗೆ ಅಂಟಿತ್ತು ಮೌಢ್ಯ
ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನುವ ಮೂಢನಂಬಿಕೆ ಇದೆ. 1973ರ ನ.2ರಂದು ಹಂಪಿಗೆ ಆಗಮಿಸಿದ್ದ ದೇವರಾಜ ಅರಸು, ಇಲ್ಲಿ ಬಂದು ಹೋದ ಕೆಲವೇ ದಿನಗಳಲ್ಲಿ ಅಧಿಕಾರ ಬಿಟ್ಟು ಕೊಡಬೇಕಾಗಿ ಬಂದಿತ್ತು. ಹೀಗಾಗಿ ಅಂದಿನಿಂದಲೇ ಈ ಕ್ಷೇತ್ರಕ್ಕೆ ಅಪವಾದ ಅಂಟಿಕೊಂಡಿತ್ತು. ಆನಂತರ, ಎಚ್.ಡಿ.ದೇವೇಗೌಡ, ಧರಮ್ ಸಿಂಗ್, ಎಸ್.ಎಂ. ಕೃಷ್ಣ, ಬಿಎಸ್ ಯಡಿಯೂರಪ್ಪ, ಎಚ್.ಡಿ ಕುಮಾರಸ್ವಾಮಿ ಅವರು ಕೂಡ ಕಾಕತಾಳೀಯ ಎಂಬಂತೆ ವಿರೂಪಾಕ್ಷ ದೇವಸ್ಥಾನಕ್ಕೆ ಬಂದು ಹೋದ ಕೆಲವೇ ಸಮಯದ ಅಂತರದಲ್ಲಿ ಅಧಿಕಾರ ಕಳಕೊಂಡಿದ್ದರು. ಉಪ ಪ್ರಧಾನಿಯಾಗಿದ್ದ ಎಲ್.ಕೆ. ಆಡ್ವಾಣಿ ಕೂಡ ಹಂಪಿಗೆ ಬಂದು ಹೋದ ಕೆಲವು ದಿನಗಳಲ್ಲಿ ಅಧಿಕಾರ ತ್ಯಜಿಸಬೇಕಾಗಿ ಬಂದಿತ್ತು. ಆದರೆ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಢ್ಯ ನಂಬುವುದಿಲ್ಲ ಎನ್ನುತ್ತಲೇ ಹಂಪಿಗೆ ಬಂದು ರುದ್ರಾಕ್ಷಿ ಮಾಲೆ ಧರಿಸಿ ಪೂಜೆ ಮಾಡಿದ್ದಾರೆ. ನಾಸ್ತಿಕವಾದಿ ಎಂದು ಹೀಗಳೆಯುವ ಮಂದಿಗೂ ದಿಟ್ಟ ಉತ್ತರ ನೀಡಿದ್ದಾರೆ.
Defying the myth that those who visit Virupaksha Temple in Hampi would lose power, Chief Minister Siddaramaiah flagged off Karnataka Sambhrama – 50, the year-long celebration of renaming the State as Karnataka, after visiting the Virupaksha Temple in the UNESCO World Heritage Site of Hampi and paying his respect to the god on Thursday.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm