ಬ್ರೇಕಿಂಗ್ ನ್ಯೂಸ್
03-11-23 09:04 pm Bangalore Correspondent ಕರ್ನಾಟಕ
ಬೆಂಗಳೂರು, ನ.3: ಎನ್ ಡಿಎ ಜೊತೆಗಿನ ಜೆಡಿಎಸ್ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗಿದ್ದು ರಾಜ್ಯ ಮಟ್ಟದಲ್ಲಿ ಚರ್ಚೆ ಜನವರಿಯಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಮಟ್ಟದಲ್ಲಿ ಜೆಡಿಎಸ್ ಜತೆಗೆ ಮೈತ್ರಿ ವಿಚಾರ ಚರ್ಚೆಯಾಗಿದೆ. ರಾಜ್ಯ ಮಟ್ಟದಲ್ಲಿ ಏನೆಲ್ಲಾ ವಿಷಯಗಳು ಚರ್ಚೆಯಾಗಬೇಕು ಎಂಬುದರ ಬಗ್ಗೆ ಜನವರಿಯಲ್ಲಿ ಸ್ಪಷ್ಟ ಚಿತ್ರಣ ಮೂಡಲಿದೆ ಎಂದರು.
ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಮಾಡಲಾಗುತ್ತಿದೆ ಎಂಬ ಸುದ್ದಿ ಹಬ್ಬಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಣಯ ಕೈಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದು ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಆಯ್ಕೆ ಮುಖ್ಯವೇ ವಿನಃ ವಿರೋಧ ಪಕ್ಷದ ನಾಯಕ ತಕ್ಷಣಕ್ಕೆ ನಡೆಯಬೇಕೆಂದೇನಿಲ್ಲ. ವಿಧಾನಸಭೆಯಲ್ಲಿರುವ ಬಿಜೆಪಿಯ 66 ಶಾಸಕರು ವಿರೋಧ ಪಕ್ಷದ ನಾಯಕನಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ರಾಜ್ಯದಲ್ಲಿ ಬರದ ಛಾಯೆ ಹಾಗೂ ವಿದ್ಯುತ್ ಕ್ಷಾಮ ತಲೆದೋರಿದ್ದು ರಾಜ್ಯ ಸರ್ಕಾರ ಆಂತರಿಕ ಕಚ್ಚಾಟಕ್ಕೆ ಸಿಲುಕಿ ಜನರ ಸಮಸ್ಯೆ, ಬರದ ಸಂಕಷ್ಟ ಎರಡನ್ನೂ ಮರೆತಿದೆ. ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು, ಸಚಿವರು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ತತ್ ಕ್ಷಣಕ್ಕೆ ಬರ ಅಧ್ಯಯನ ತಂಡ ಕಳಿಸಿಕೊಟ್ಟಿದೆ. ರಾಜ್ಯ ಸರಕಾರ ಬರದಿಂದ ಏನೆಲ್ಲಾ ಹಾನಿಯಾಗಿದೆ, ಎಷ್ಟು ವೆಚ್ಚ ತಗಲಲಿದೆ ಎಂಬುದರ ಪ್ರಸ್ತಾವನೆಯನ್ನೇ ಇದುವರೆಗೂ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸದಿದ್ದರೆ ಸಂಸದರು ಏನು ಮಾಡಲು ಸಾಧ್ಯವಿದೆ ಪ್ರಸ್ತಾವನೆ ನೀಡಿದರೆ ಕೇಂದ್ರದ ಮನವೊಲಿಕೆ ಕಾರ್ಯವನ್ನು ಸಂಸದರಾಗಿ ನಾವು ಮಾಡಬಹುದಾಗಿದೆ. ರಾಜ್ಯ ಸರ್ಕಾರ ಕೇಂದ್ರದ ಕಡೆ ಕೈ ತೋರಿಸುವ ಬದಲು ತನ್ನಲ್ಲಿರುವ ಅನುದಾನವನ್ನು ಬರ ಪರಿಹಾರಕ್ಕೆಂದು ಮೊದಲು ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
![]()
ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇಷ್ಟು ಬೇಗ ಜನ ವಿರೋಧಿ ಸರ್ಕಾರ ಆಗುತ್ತದೆ ಎಂದು ಯಾರೊಬ್ಬರೂ ನಿರೀಕ್ಷಿಸಿರಲಿಲ್ಲ. ಬರದ ಛಾಯೆಯಿಂದ ಸುಮಾರು 250 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರೂ ಐಟಿ ದಾಳಿಯಾದರೂ, ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೂ ಯಾವುದರ ಬಗ್ಗೆಯೂ ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ಇಲ್ಲವಾಗಿದೆ. ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಕಾಂಗ್ರೆಸ್ ಸರಕಾರ ತಾನಾಗಿಯೇ ಪತನಗೊಳ್ಳಲಿದ್ದು, ಬಿಜೆಪಿ ಆ ಯತ್ನ ಮಾಡುವುದಿಲ್ಲ ಎಂದರು.
JDS merger with BJP, Final discussion in January says MP Nalin Kateel.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm